ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು ದಿನ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಕಾನೂನಾತ್ಮಕ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ರಾಮಚಂದ್ರ ರಾವ್ ಚರ್ಚಿಸಲಿದ್ದಾರೆ. ಮತ್ತೊಂದೆಡೆ ಡಿಜಿಪಿಗೆ ಶಾಕ್ ಕೊಡುವ ತಯಾರಿಯಲ್ಲಿ ರಾಜ್ಯ ಸರ್ಕಾರ ಇದ್ದು, ಯಾವುದೇ ಕ್ಷಣ ಅಧಿಕಾರಿ ಅಮಾನತು ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದರು. ಅದಾದ ಕೆಲವೇ ಹೊತ್ತಲ್ಲಿ ಡಿಜಿಪಿ ರಜೆ ಹಾಕಿ ತೆರಳಿದ್ದಾರೆ. ಇನ್ನು ಘಟನೆ ಬಗ್ಗೆ ಮಾಜಿ ಪೊಲೀಸ್ ಅಧಿಕಾರಿಗಳಿಂದಲೂ ಆಕ್ರೋಶ ವ್ಯಕ್ತವಾಗಿದೆ.




