ರಾಜ್ಯ

ಧರ್ಮಸ್ಥಳ | ಯೂಟ್ಯೂಬರ್‌ ಮೇಲೆ ಹಲ್ಲೆ : ನಟ ಪ್ರಕಾಶ್‌ ರಾಜ್‌ ಖಂಡನೆ

ಬೆಂಗಳೂರು : ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್‍ ಗಳ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನು ನಟ ಪ್ರಕಾಶ್ ರಾಜ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ ಸೌಜನ್ಯಳಿಗಾಗಿ ನ್ಯಾಯ ಕೇಳಿದರೆ, ಇವರಿಗೆ ಯಾಕೆ ಕೋಪ. ಈ ಗೂಂಡಾಗಳನ್ನು ಬಂಧಿಸಿ, ಕ್ರಮ ಕೈಗೊಳ್ಳಿ, ಸತ್ಯ ಹೊರತನ್ನಿ ಎಂದು ಆಗ್ರಹಿಸಿದ್ದಾರೆ.

ಧರ್ಮಸ್ಥಳದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧ್ಯಮ ಮಿತ್ರರ ಮೇಲಿನ ಹಲ್ಲೆ ಖಂಡನಾರ್ಹ.. ಇಂತಹ ಗೂಂಡಾಗಳಿಂದಲೇ ಭಕ್ತಾದಿಗಳು ನಂಬುವ ಧರ್ಮಸ್ಥಳಕ್ಕೆ ಕಳಂಕ ಬಂದಿರುವುದು. ಸೌಜನ್ಯಾಳ ದಾರುಣ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ. ದಯವಿಟ್ಟು ಬಂಧಿಸಿ ಸತ್ಯ ಹೊರತನ್ನಿ ಎಂದು ಒತ್ತಾಯಿಸಿದ್ದಾರೆ.

ಈ ಗೂಂಡಾಗಳ ಹಿಂದೆ ಯಾರಿದ್ದಾರೆ. ಯಾರು ಅವರನ್ನು ಕಳಿಸಿ, ಹೊಡೆಸುತ್ತಿದ್ದಾರೆ. ಅನುಮಾನ ಹೆಚ್ಚುತ್ತಿದೆ. ದಯವಿಟ್ಟು ಪೊಲೀಸರು ಗೂಂಡಾಗಳನ್ನು ಬಂಧಿಸಬೇಕು. ಸತ್ಯಾಸತ್ಯಯನ್ನು ತಿಳಿದುಕೊಳ್ಳಬೇಕು. ಕ್ರಮ ಕೈಗೊಳ್ಳಬೇಕು ನ್ಯಾಯ ಕೇಳುವುದು ನಮ್ಮ ಹಕ್ಕು-ಕರ್ತವ್ಯ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

2 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

3 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

3 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

3 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

3 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

4 hours ago