ಬೆಂಗಳೂರು : ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್ ಗಳ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನು ನಟ ಪ್ರಕಾಶ್ ರಾಜ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ ಸೌಜನ್ಯಳಿಗಾಗಿ ನ್ಯಾಯ ಕೇಳಿದರೆ, ಇವರಿಗೆ ಯಾಕೆ ಕೋಪ. ಈ ಗೂಂಡಾಗಳನ್ನು ಬಂಧಿಸಿ, ಕ್ರಮ ಕೈಗೊಳ್ಳಿ, ಸತ್ಯ ಹೊರತನ್ನಿ ಎಂದು ಆಗ್ರಹಿಸಿದ್ದಾರೆ.
ಧರ್ಮಸ್ಥಳದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧ್ಯಮ ಮಿತ್ರರ ಮೇಲಿನ ಹಲ್ಲೆ ಖಂಡನಾರ್ಹ.. ಇಂತಹ ಗೂಂಡಾಗಳಿಂದಲೇ ಭಕ್ತಾದಿಗಳು ನಂಬುವ ಧರ್ಮಸ್ಥಳಕ್ಕೆ ಕಳಂಕ ಬಂದಿರುವುದು. ಸೌಜನ್ಯಾಳ ದಾರುಣ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ. ದಯವಿಟ್ಟು ಬಂಧಿಸಿ ಸತ್ಯ ಹೊರತನ್ನಿ ಎಂದು ಒತ್ತಾಯಿಸಿದ್ದಾರೆ.
ಈ ಗೂಂಡಾಗಳ ಹಿಂದೆ ಯಾರಿದ್ದಾರೆ. ಯಾರು ಅವರನ್ನು ಕಳಿಸಿ, ಹೊಡೆಸುತ್ತಿದ್ದಾರೆ. ಅನುಮಾನ ಹೆಚ್ಚುತ್ತಿದೆ. ದಯವಿಟ್ಟು ಪೊಲೀಸರು ಗೂಂಡಾಗಳನ್ನು ಬಂಧಿಸಬೇಕು. ಸತ್ಯಾಸತ್ಯಯನ್ನು ತಿಳಿದುಕೊಳ್ಳಬೇಕು. ಕ್ರಮ ಕೈಗೊಳ್ಳಬೇಕು ನ್ಯಾಯ ಕೇಳುವುದು ನಮ್ಮ ಹಕ್ಕು-ಕರ್ತವ್ಯ ಎಂದು ಹೇಳಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…