ರಾಜ್ಯ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಜೆಡಿಎಸ್ ಶಾಸಕ ಎ.ಮಂಜು ಹೇಳಿದ್ದಿಷ್ಟು.!

ಬೆಂಗಳೂರು: ಧರ್ಮಸ್ಥಳ ಪವಿತ್ರ ಧಾರ್ಮಿಕ ಸ್ಥಳವಾಗಿದ್ದು, ಭಕ್ತರು ಇಟ್ಟಿರುವ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಜೆಡಿಎಸ್ ಶಾಸಕ ಎ.ಮಂಜು ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್‍ಐಟಿ ತನಿಖೆ ಮಾಡಿದೆ. ತನಿಖೆಗೆ ಸಂಪೂರ್ಣ ಸಹಕಾರವನ್ನು ಕೊಟ್ಟಿದೆ. ಧರ್ಮಸ್ಥಳದ ಸುತ್ತಮುತ್ತ ಹೂಳಲಾಗಿದೆ ಎನ್ನಲಾದ ಶವಗಳಿಗಾಗಿ ಎಸ್‍ಐಟಿ ಶೋಧವನ್ನು ಕೈಗೊಂಡಿದೆ. ತನಿಖೆಯ ನಂತರ ಯಾವ ಅಂಶಗಳು ಹೊರಬರುತ್ತವೋ ಕಾದು ನೋಡೋಣ ಎಂದರು.

ತಂತ್ರಜ್ಞಾನವನ್ನು ಬಳಸಿ ಅಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಗುರುತರವಾದ ಸಾಕ್ಷ್ಯ ಅಥವಾ ಅಸ್ತಿ ಸಿಕ್ಕಿಲ್ಲ ಎಂದು ವರದಿಯಾಗಿದೆ. ಈ ರೀತಿ ತಪ್ಪು ಮಾಹಿತಿ ನೀಡಿದ್ದರೆ ಅಂಥವರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು.

ಧರ್ಮಸ್ಥಳದಲ್ಲಿರುವ ದೇವರಿಗಾಗಲಿ, ಅಣ್ಣಪ್ಪಸ್ವಾಮಿಗಾಗಲಿ ಯಾವುದೇ ರೀತಿಯ ಕೆಟ್ಟದಾಗಲು ಈ ಸಮಾಜ ಒಪ್ಪುವುದಿಲ್ಲ. ಅಂತಹ ನಂಬಿಕೆಯನ್ನು ಭಕ್ತರು ಹೊಂದಿದ್ದಾರೆ. ಒಂದು ವೇಳೆ ವೈಯಕ್ತಿಕವಾಗಿ ಯಾವುದಾದರೂ ತಪ್ಪುಗಳು ನಡೆದಿದ್ದರೆ ಎಸ್‍ಐಟಿ ತನಿಖೆಯಿಂದ ಸತ್ಯಾಂಶ ಹೊರಬರಲಿ ಎಂದರು.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 mins ago

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

14 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

15 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

17 hours ago