jds manju
ಬೆಂಗಳೂರು: ಧರ್ಮಸ್ಥಳ ಪವಿತ್ರ ಧಾರ್ಮಿಕ ಸ್ಥಳವಾಗಿದ್ದು, ಭಕ್ತರು ಇಟ್ಟಿರುವ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಜೆಡಿಎಸ್ ಶಾಸಕ ಎ.ಮಂಜು ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆ ಮಾಡಿದೆ. ತನಿಖೆಗೆ ಸಂಪೂರ್ಣ ಸಹಕಾರವನ್ನು ಕೊಟ್ಟಿದೆ. ಧರ್ಮಸ್ಥಳದ ಸುತ್ತಮುತ್ತ ಹೂಳಲಾಗಿದೆ ಎನ್ನಲಾದ ಶವಗಳಿಗಾಗಿ ಎಸ್ಐಟಿ ಶೋಧವನ್ನು ಕೈಗೊಂಡಿದೆ. ತನಿಖೆಯ ನಂತರ ಯಾವ ಅಂಶಗಳು ಹೊರಬರುತ್ತವೋ ಕಾದು ನೋಡೋಣ ಎಂದರು.
ತಂತ್ರಜ್ಞಾನವನ್ನು ಬಳಸಿ ಅಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಇದುವರೆಗೂ ಯಾವುದೇ ಗುರುತರವಾದ ಸಾಕ್ಷ್ಯ ಅಥವಾ ಅಸ್ತಿ ಸಿಕ್ಕಿಲ್ಲ ಎಂದು ವರದಿಯಾಗಿದೆ. ಈ ರೀತಿ ತಪ್ಪು ಮಾಹಿತಿ ನೀಡಿದ್ದರೆ ಅಂಥವರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು.
ಧರ್ಮಸ್ಥಳದಲ್ಲಿರುವ ದೇವರಿಗಾಗಲಿ, ಅಣ್ಣಪ್ಪಸ್ವಾಮಿಗಾಗಲಿ ಯಾವುದೇ ರೀತಿಯ ಕೆಟ್ಟದಾಗಲು ಈ ಸಮಾಜ ಒಪ್ಪುವುದಿಲ್ಲ. ಅಂತಹ ನಂಬಿಕೆಯನ್ನು ಭಕ್ತರು ಹೊಂದಿದ್ದಾರೆ. ಒಂದು ವೇಳೆ ವೈಯಕ್ತಿಕವಾಗಿ ಯಾವುದಾದರೂ ತಪ್ಪುಗಳು ನಡೆದಿದ್ದರೆ ಎಸ್ಐಟಿ ತನಿಖೆಯಿಂದ ಸತ್ಯಾಂಶ ಹೊರಬರಲಿ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…