ರಾಜ್ಯ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್:‌ ರತ್ನಗಿರಿ ಬೆಟ್ಟದಲ್ಲಿ ಅಸ್ಥಿಪಂಜರಕ್ಕಾಗಿ ಶೋಧಕಾರ್ಯ

ಧರ್ಮಸ್ಥಳ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೂರುದಾರ ತೋರಿಸಿರುವ 16ನೇ ಪಾಯಿಂಟ್‌ನಲ್ಲಿ ಎಸ್‌ಐಟಿ ತಂಡ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಮಾಸ್ಕ್‌ ಮ್ಯಾನ್‌ ದೂರುದಾರ ತೋರಿಸಿರುವ ಜಾಗ ಧರ್ಮಸ್ಥಳದ ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ ತಪ್ಪಲಿನಲ್ಲಿ 16ನೇ ಪಾಯಿಂಟ್‌ ಎಂದು ಗುರುತಿಸಲಾಗಿದ್ದು, ಅಲ್ಲಿ ಅಸ್ಥಿಪಂಜರಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್‌ ಮ್ಯಾನ್‌ ಶವಗಳನ್ನು ಹೂತು ಹಾಕಿರುವುದನ್ನು ನಾವು ನೋಡಿದ್ದೇವೆ ಎಂದು ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಬಂದು ಇಬ್ಬರು ಸ್ಥಳೀಯರು ದೂರು ನೀಡಿದ್ದಾರೆ.

ನಮ್ಮನ್ನು ಕರೆದುಕೊಂಡು ಹೋಗಿ, ನಾವು ಜಾಗ ತೋರಿಸುತ್ತೇವೆ. ನಾವು ತೋರಿಸಿದ ಜಾಗವನ್ನು ಶೋಧ ಮಾಡಿ ಎಂದು ಎಸ್‌ಐಟಿಗೆ ಮನವಿ ಸಲ್ಲಿಸಿದ್ದಾರೆ. ಮನವಿ ಪಡೆದ ಎಸ್‌ಐಟಿ ಧರ್ಮಸ್ಥಳ ಠಾಣೆಗೆ ಅಧಿಕೃತ ದೂರು ನೀಡುವಂತೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago