dharmastal case
ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದೆ.
ಸ್ಥಳಕ್ಕೆ ಆಗಮಿಸಿದ ಎಸ್ಐಟಿ ಅಧಿಕಾರಿಗಳು ದೂರುದಾರನಿಂದ ಇಂಚಿಂಚೂ ಮಾಹಿತಿ ಕಲೆಹಾಕುತ್ತಿದ್ದು, ಇಂದು ಮೂರು ಕಡೆ ಏಕಕಾಲದಲ್ಲಿ ಅಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಸಮಾಧಿ ಅಗೆಯುವ ಪ್ರಕ್ರಿಯೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಮೂರು ಸಮಾಧಿ ಅಗೆಯುವ ಕಾರ್ಯ ಪ್ರಗತಿಯಲ್ಲಿದೆ.
ಸೋಮವಾರ ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಗಳನ್ನು ಮಾರ್ಕ್ ಮಾಡಿರುವ ಎಸ್ಐಟಿ ಅಧಿಕಾರಿಗಳು ಇಂದು ಏಕಕಾಲದಲ್ಲಿ ಮೂರು ಜಾಗಗಳನ್ನು ಅಗೆಯುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾನೆ. ವಿಧಿ ವಿಜ್ಞಾನ ತಜ್ಞರು, ಭದ್ರತಾ ಸಿಬ್ಬಂದಿ ದೂರುದಾರನೊಂದಿಗೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ನಿನ್ನೆಯಿಂದ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ಸಂಜೆಯವರೆಗೂ ಸ್ಥಳ ಅಗೆಯುವ ಕಾರ್ಯ ನಡೆದಿದ್ದು, ಯಾವುದೇ ಶವ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಏಕಕಾಲದಲ್ಲಿ ಮೂರು ಕಡೆ ಸ್ಥಳ ಅಗೆಯುವ ಕೆಲಸ ನಡೆಯುತ್ತಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…