ರಾಜ್ಯ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್:‌ ಏಕಕಾಲದಲ್ಲಿ 3 ಸಮಾಧಿ ಅಗೆಯುವ ಕಾರ್ಯ ಆರಂಭ

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದೆ.

ಸ್ಥಳಕ್ಕೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ದೂರುದಾರನಿಂದ ಇಂಚಿಂಚೂ ಮಾಹಿತಿ ಕಲೆಹಾಕುತ್ತಿದ್ದು, ಇಂದು ಮೂರು ಕಡೆ ಏಕಕಾಲದಲ್ಲಿ ಅಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಸಮಾಧಿ ಅಗೆಯುವ ಪ್ರಕ್ರಿಯೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಮೂರು ಸಮಾಧಿ ಅಗೆಯುವ ಕಾರ್ಯ ಪ್ರಗತಿಯಲ್ಲಿದೆ.

ಸೋಮವಾರ ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಗಳನ್ನು ಮಾರ್ಕ್‌ ಮಾಡಿರುವ ಎಸ್‌ಐಟಿ ಅಧಿಕಾರಿಗಳು ಇಂದು ಏಕಕಾಲದಲ್ಲಿ ಮೂರು ಜಾಗಗಳನ್ನು ಅಗೆಯುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾನೆ. ವಿಧಿ ವಿಜ್ಞಾನ ತಜ್ಞರು, ಭದ್ರತಾ ಸಿಬ್ಬಂದಿ ದೂರುದಾರನೊಂದಿಗೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ನಿನ್ನೆಯಿಂದ ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ಸಂಜೆಯವರೆಗೂ ಸ್ಥಳ ಅಗೆಯುವ ಕಾರ್ಯ ನಡೆದಿದ್ದು, ಯಾವುದೇ ಶವ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಏಕಕಾಲದಲ್ಲಿ ಮೂರು ಕಡೆ ಸ್ಥಳ ಅಗೆಯುವ ಕೆಲಸ ನಡೆಯುತ್ತಿದೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

6 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

7 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

8 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

9 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

9 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

10 hours ago