dharmastal case
ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳದಲ್ಲಿ ಅಗೆಯುವ ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದೆ.
ಸ್ಥಳಕ್ಕೆ ಆಗಮಿಸಿದ ಎಸ್ಐಟಿ ಅಧಿಕಾರಿಗಳು ದೂರುದಾರನಿಂದ ಇಂಚಿಂಚೂ ಮಾಹಿತಿ ಕಲೆಹಾಕುತ್ತಿದ್ದು, ಇಂದು ಮೂರು ಕಡೆ ಏಕಕಾಲದಲ್ಲಿ ಅಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಸಮಾಧಿ ಅಗೆಯುವ ಪ್ರಕ್ರಿಯೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಮೂರು ಸಮಾಧಿ ಅಗೆಯುವ ಕಾರ್ಯ ಪ್ರಗತಿಯಲ್ಲಿದೆ.
ಸೋಮವಾರ ದೂರುದಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಗಳನ್ನು ಮಾರ್ಕ್ ಮಾಡಿರುವ ಎಸ್ಐಟಿ ಅಧಿಕಾರಿಗಳು ಇಂದು ಏಕಕಾಲದಲ್ಲಿ ಮೂರು ಜಾಗಗಳನ್ನು ಅಗೆಯುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾನೆ. ವಿಧಿ ವಿಜ್ಞಾನ ತಜ್ಞರು, ಭದ್ರತಾ ಸಿಬ್ಬಂದಿ ದೂರುದಾರನೊಂದಿಗೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ನಿನ್ನೆಯಿಂದ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ಸಂಜೆಯವರೆಗೂ ಸ್ಥಳ ಅಗೆಯುವ ಕಾರ್ಯ ನಡೆದಿದ್ದು, ಯಾವುದೇ ಶವ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಏಕಕಾಲದಲ್ಲಿ ಮೂರು ಕಡೆ ಸ್ಥಳ ಅಗೆಯುವ ಕೆಲಸ ನಡೆಯುತ್ತಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…