ರಾಜ್ಯ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿ ಮುಂದೆ ಸಾಕ್ಷಿದಾರನ ಸ್ಫೋಟಕ ಮಾಹಿತಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರ ಎಸ್‌ಐಟಿ ಮುಂದೆ ಸ್ಫೋಟಕ ಮಾಹಿತಿಯೊಂದನ್ನು ಬಾಯ್ಬಿಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ನಾನು 2014ರ ನಂತರ ತಮಿಳುನಾಡಿನಲ್ಲಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು ಕೇಳಿತ್ತು. ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿರುವುದಾಗಿ ಹೇಳಿದ್ದೇ. ಆದರೆ ಈ ಗುಂಪು ತಪ್ಪು ಹೇಳಿಕೆ ನೀಡುವಂತೆ ಒತ್ತಡ ಹಾಕಿತ್ತು. 2023ರ ಡಿಸೆಂಬರ್‌ನಲ್ಲಿ ತಮಿಳುನಾಡಿನಿಂದ ಆ ಗುಂಪು ನನ್ನನ್ನು ಕರೆತಂದಿತು. ಮೊದ ಮೊದಲು ಕೋರ್ಟ್‌ ಮುಂದೆ ಹೇಳಿಕೆ ನೀಡಲು ಭಯ ಆಗುತ್ತಿತ್ತು. ಬಳಿಕ ಧೈರ್ಯ ಬಂತು. ಹೀಗಾಗಿ ನಾನು ಇಲ್ಲಿಗೆ ಬಂದೆ ಎಂದು ಹೇಳಿದ್ದಾನೆ ಎನ್ನಲಾಗಿದೆ.

ಆ ಗುಂಪು ಬುರುಡೆ ತಂದು ಹೇಳಿದ ರೀತಿ ನಡೆದುಕೊಂಡೆ. ಪೊಲೀಸರ ಮುಂದೆ ಏನೇನು ಹೇಳಬೇಕು ಎಂಬುದನ್ನು ಮೂವರು ಪ್ರತಿನಿತ್ಯ ಹೇಳಿಕೊಡುತ್ತಿದ್ದರು. ಅದೇ ರೀತಿ ಪೊಲೀಸರ ಮುಂದೆ ಹೇಳಿದ್ದೇನೆ ಎಂದು ಎಸ್‌ಐಟಿ ಅಧಿಕಾರಿಗಳ ಮುಂದೆ ಮಾಸ್ಕ್‌ ಮ್ಯಾನ್‌ ಹೇಳಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

3 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

3 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

3 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

3 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

3 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago