ರಾಜ್ಯ

ಧರ್ಮಸ್ಥಳ ಪ್ರಕರಣ | 100 ಮೂಳೆಗಳು, ತಲೆ ಬುರುಡೆ ಪತ್ತೆ

ಧರ್ಮಸ್ಥಳ : ಸೋಮವಾರ ನಡೆದ ಉತ್ಖನನ ವೇಳೆ ಸುಮಾರು 100 ಮೂಳೆಗಳು ಮತ್ತು ತಲೆಬುರುಡೆ ಪತ್ತೆಯಾಗಿದ್ದವು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ಸ್ನಾನಘಟ್ಟ ಬಳಿಯ ಅರಣ್ಯ ಪ್ರದೇಶದಲ್ಲಿ ಆರನೇ ದಿನದಲ್ಲಿ ಈ ಅವಶೇಷಗಳು ಪತ್ತೆಯಾಗಿದ್ದು, ತಲೆಬುರುಡೆ, ಬೆನ್ನುಮೂಳೆಯ ಮೂಳೆಗಳು ಸೇರಿದಂತೆ ಸುಮಾರು 100 ಮೂಳೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ದೂರುದಾರ ತೋರಿಸಿದ 11ನೇ ಸ್ಥಳದಿಂದ ಸುಮಾರು 100 ಮೀಟರ್ ಅಂತರದಲ್ಲಿ ಈ ಮಾನವ ಅವಶೇಷಗಳು ಪತ್ತೆಯಾಗಿವೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ. ಪತ್ತೆಯಾದ ಅಸ್ಥಿಪಂಜರದ ಭಾಗಗಳು ಇಬ್ಬರು ವ್ಯಕ್ತಿಗಳಿಗೆ ಸೇರಿರಬಹುದು ಎನ್ನಲಾಗಿದೆ. ಉದ್ದವಾದ ಬೆನ್ನುಮೂಳೆಯ ಪಟ್ಟಿ ಕೂಡ ಕಂಡುಬಂದಿದೆ. ತಜ್ಞರ ತಂಡ ವೈಜ್ಞಾನಿಕವಾಗಿ ಇವುಗಳನ್ನು ಸಂಗ್ರಹಿಸಿದೆ.

ಕುತೂಹಲ ಮೂಡಿಸಿದ ದೂರುದಾರನ ನಡೆ:- ದೂರುದಾರ ಈ ಹಿಂದೆ ಧರ್ಮಸ್ಥಳ ಸ್ನಾನಘಟ್ಟದ ಬಳಿ ಮತ್ತು ಅರಣ್ಯದೊಳಗೆ 13 ಶವ ಹೂತಿಟ್ಟ 13 ಸಂಭವನೀಯ ಜಾಗಗಳನ್ನು ಗುರುತಿಸಿದ್ದರು. ಇವುಗಳಲ್ಲಿ 11 ಜಾಗಗಳಲ್ಲಿ ಇಲ್ಲಿಯವರೆಗೆ ಉತ್ಖನನ ಮಾಡಲಾಗಿದೆ. ಸೋಮವಾರ 11ನೇ ಜಾಗದಲ್ಲಿ ಜಾಗ ಅಗೆಯುವಿಕೆಗೆ ನಿರ್ಧರಿಸಲಾಗಿತ್ತು. ಆದರೆ, ದೂರುದಾರ ಅದರ ಬದಲಾಗಿ ಹತ್ತಿರದ ಬೇರೆ ಸ್ಥಳದಲ್ಲಿ ಅಗೆಯಲು ಮನವಿ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

13 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

14 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

14 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

15 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

15 hours ago