ರಾಜ್ಯ

ಧರ್ಮಸ್ಥಳ ಪ್ರಕರಣ | 100 ಮೂಳೆಗಳು, ತಲೆ ಬುರುಡೆ ಪತ್ತೆ

ಧರ್ಮಸ್ಥಳ : ಸೋಮವಾರ ನಡೆದ ಉತ್ಖನನ ವೇಳೆ ಸುಮಾರು 100 ಮೂಳೆಗಳು ಮತ್ತು ತಲೆಬುರುಡೆ ಪತ್ತೆಯಾಗಿದ್ದವು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ಸ್ನಾನಘಟ್ಟ ಬಳಿಯ ಅರಣ್ಯ ಪ್ರದೇಶದಲ್ಲಿ ಆರನೇ ದಿನದಲ್ಲಿ ಈ ಅವಶೇಷಗಳು ಪತ್ತೆಯಾಗಿದ್ದು, ತಲೆಬುರುಡೆ, ಬೆನ್ನುಮೂಳೆಯ ಮೂಳೆಗಳು ಸೇರಿದಂತೆ ಸುಮಾರು 100 ಮೂಳೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ದೂರುದಾರ ತೋರಿಸಿದ 11ನೇ ಸ್ಥಳದಿಂದ ಸುಮಾರು 100 ಮೀಟರ್ ಅಂತರದಲ್ಲಿ ಈ ಮಾನವ ಅವಶೇಷಗಳು ಪತ್ತೆಯಾಗಿವೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ. ಪತ್ತೆಯಾದ ಅಸ್ಥಿಪಂಜರದ ಭಾಗಗಳು ಇಬ್ಬರು ವ್ಯಕ್ತಿಗಳಿಗೆ ಸೇರಿರಬಹುದು ಎನ್ನಲಾಗಿದೆ. ಉದ್ದವಾದ ಬೆನ್ನುಮೂಳೆಯ ಪಟ್ಟಿ ಕೂಡ ಕಂಡುಬಂದಿದೆ. ತಜ್ಞರ ತಂಡ ವೈಜ್ಞಾನಿಕವಾಗಿ ಇವುಗಳನ್ನು ಸಂಗ್ರಹಿಸಿದೆ.

ಕುತೂಹಲ ಮೂಡಿಸಿದ ದೂರುದಾರನ ನಡೆ:- ದೂರುದಾರ ಈ ಹಿಂದೆ ಧರ್ಮಸ್ಥಳ ಸ್ನಾನಘಟ್ಟದ ಬಳಿ ಮತ್ತು ಅರಣ್ಯದೊಳಗೆ 13 ಶವ ಹೂತಿಟ್ಟ 13 ಸಂಭವನೀಯ ಜಾಗಗಳನ್ನು ಗುರುತಿಸಿದ್ದರು. ಇವುಗಳಲ್ಲಿ 11 ಜಾಗಗಳಲ್ಲಿ ಇಲ್ಲಿಯವರೆಗೆ ಉತ್ಖನನ ಮಾಡಲಾಗಿದೆ. ಸೋಮವಾರ 11ನೇ ಜಾಗದಲ್ಲಿ ಜಾಗ ಅಗೆಯುವಿಕೆಗೆ ನಿರ್ಧರಿಸಲಾಗಿತ್ತು. ಆದರೆ, ದೂರುದಾರ ಅದರ ಬದಲಾಗಿ ಹತ್ತಿರದ ಬೇರೆ ಸ್ಥಳದಲ್ಲಿ ಅಗೆಯಲು ಮನವಿ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

13 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

14 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

16 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

18 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

23 mins ago

ಜೆನ್ ಝೀಗಳಿಗೆ ಒಂದೆಡೆ ದೇಶಾಭಿಮಾನ; ಮತ್ತೊಂದೆಡೆ ಅಸಮಾಧಾನ

ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…

28 mins ago