ರಾಜ್ಯ

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ದಿಕ್ಕು ತಪ್ಪಿಸುತ್ತಿರುವ ಸಹಾಯಕ ಪೊಲೀಸ್‌ ಆಯುಕ್ತರು

ಬೆಂಗಳೂರು : ಧರ್ಮಸ್ಥಳದಲ್ಲಿ ಅನೇಕ ಶವ ಹೂತಿಡಲಾಗಿದೆ ಎಂಬ ಅನಾಮಿಕ ವ್ಯಕ್ತಿಯ ದೂರಿನ ಮೇರೆಗೆ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳಿಗೆ ಸಹಾಯಕ ಪೊಲೀಸ್‌‍ ಆಯುಕ್ತರೊಬ್ಬರು ದಿಕ್ಕು ತಪ್ಪಿಸಿದ ಪ್ರಸಂಗ ಬೆಳಕಿಗೆ ಬಂದಿದೆ.

ಸೋಮವಾರ ಧರ್ಮಸ್ಥಳದ ಸ್ನಾನಘಟ್ಟದ 11 ನೇ ಸ್ಥಳದಲ್ಲಿ ಎಸ್‌‍ಐಟಿ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ, ಬೆಳ್ತಂಗಡಿ ತಹಸೀಲ್ದಾರಿ ಸೇರಿದಂತೆ ಮತ್ತಿತರರ ಸಮುಖದಲ್ಲಿ ಉತ್ಖನನ ಕಾರ್ಯ ನಡೆಸುತ್ತಿದ್ದರು. ಅನಾಮಧೇಯ ವ್ಯಕ್ತಿ ನೀಡಿದ ದೂರಿನಂತೆ 11ನೇ ಸ್ಥಳವಾದ ಸ್ನಾನಘಟ್ಟದಲ್ಲಿ ಉತ್ಖನನ ಕಾರ್ಯ ನಡೆಸುವ ಬದಲು ಎಸಿಯವರು ಬೇರೊಂದು ಸ್ಥಳವನ್ನು ಗುರುತಿಸಿ ಇಲ್ಲಿಯೇ ಉತ್ಖನನ ನಡೆಸಬೇಕೆಂದು ಕಾರ್ಮಿಕರಿಗೆ ಸೂಚನೆ ಕೊಟ್ಟಿದ್ದರು. ಇದು ಸ್ಥಳದಲ್ಲಿದ್ದ ಎಸ್‌‍ಐಟಿ ಅಧಿಕಾರಿಗಳಿಗೂ ತಕ್ಷಣವೇ ಹೊಳೆದಿರಲಿಲ್ಲ.

ಎಸಿ ಯವರು ಯಾವ ಕಾರಣಕ್ಕಾಗಿ 11ನೇ ಸ್ಥಳವನ್ನು ಬಿಟ್ಟು ಬೇರೊಂದು ಕಡೆ ಉತ್ಖನನ ನಡೆಸಿದರು ಎಂಬುದು ನಿಗೂಢವಾಗಿಯೇ ಉಳಿದಿದೆ. ಕೆಲವೇ ಮೀಟರ್‌ಗಳ ಅಂತರದಲ್ಲಿ ಉತ್ಖನನ ನಡೆಯುತ್ತಿದ್ದ ವೇಳೆ ಮಾನವನ ಅಸ್ಥಿಪಂಜರ ಪತ್ತೆಯಾಗಿತ್ತು. ಈಗ ಎಸಿ ನಡೆ ಹಲವು ಸಂಶಯಗಳನ್ನು ಹುಟ್ಟುಹಾಕಿದ್ದು, ಎಸ್‌‍ಐಟಿ ಅಧಿಕಾರಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

3 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

4 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

6 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

6 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

7 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

7 hours ago