ರಾಜ್ಯ

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ದಿಕ್ಕು ತಪ್ಪಿಸುತ್ತಿರುವ ಸಹಾಯಕ ಪೊಲೀಸ್‌ ಆಯುಕ್ತರು

ಬೆಂಗಳೂರು : ಧರ್ಮಸ್ಥಳದಲ್ಲಿ ಅನೇಕ ಶವ ಹೂತಿಡಲಾಗಿದೆ ಎಂಬ ಅನಾಮಿಕ ವ್ಯಕ್ತಿಯ ದೂರಿನ ಮೇರೆಗೆ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳಿಗೆ ಸಹಾಯಕ ಪೊಲೀಸ್‌‍ ಆಯುಕ್ತರೊಬ್ಬರು ದಿಕ್ಕು ತಪ್ಪಿಸಿದ ಪ್ರಸಂಗ ಬೆಳಕಿಗೆ ಬಂದಿದೆ.

ಸೋಮವಾರ ಧರ್ಮಸ್ಥಳದ ಸ್ನಾನಘಟ್ಟದ 11 ನೇ ಸ್ಥಳದಲ್ಲಿ ಎಸ್‌‍ಐಟಿ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ, ಬೆಳ್ತಂಗಡಿ ತಹಸೀಲ್ದಾರಿ ಸೇರಿದಂತೆ ಮತ್ತಿತರರ ಸಮುಖದಲ್ಲಿ ಉತ್ಖನನ ಕಾರ್ಯ ನಡೆಸುತ್ತಿದ್ದರು. ಅನಾಮಧೇಯ ವ್ಯಕ್ತಿ ನೀಡಿದ ದೂರಿನಂತೆ 11ನೇ ಸ್ಥಳವಾದ ಸ್ನಾನಘಟ್ಟದಲ್ಲಿ ಉತ್ಖನನ ಕಾರ್ಯ ನಡೆಸುವ ಬದಲು ಎಸಿಯವರು ಬೇರೊಂದು ಸ್ಥಳವನ್ನು ಗುರುತಿಸಿ ಇಲ್ಲಿಯೇ ಉತ್ಖನನ ನಡೆಸಬೇಕೆಂದು ಕಾರ್ಮಿಕರಿಗೆ ಸೂಚನೆ ಕೊಟ್ಟಿದ್ದರು. ಇದು ಸ್ಥಳದಲ್ಲಿದ್ದ ಎಸ್‌‍ಐಟಿ ಅಧಿಕಾರಿಗಳಿಗೂ ತಕ್ಷಣವೇ ಹೊಳೆದಿರಲಿಲ್ಲ.

ಎಸಿ ಯವರು ಯಾವ ಕಾರಣಕ್ಕಾಗಿ 11ನೇ ಸ್ಥಳವನ್ನು ಬಿಟ್ಟು ಬೇರೊಂದು ಕಡೆ ಉತ್ಖನನ ನಡೆಸಿದರು ಎಂಬುದು ನಿಗೂಢವಾಗಿಯೇ ಉಳಿದಿದೆ. ಕೆಲವೇ ಮೀಟರ್‌ಗಳ ಅಂತರದಲ್ಲಿ ಉತ್ಖನನ ನಡೆಯುತ್ತಿದ್ದ ವೇಳೆ ಮಾನವನ ಅಸ್ಥಿಪಂಜರ ಪತ್ತೆಯಾಗಿತ್ತು. ಈಗ ಎಸಿ ನಡೆ ಹಲವು ಸಂಶಯಗಳನ್ನು ಹುಟ್ಟುಹಾಕಿದ್ದು, ಎಸ್‌‍ಐಟಿ ಅಧಿಕಾರಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

17 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

32 mins ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

1 hour ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

2 hours ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

4 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

4 hours ago