ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ ಜೈಲಿನಿಂದ ಹೊರ ಬರಲಿದ್ದಾನೆ.
ಬುಧವಾರ ಬೆಳ್ತಂಗಡಿಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದಲ್ಲಿ ಚಿನ್ನಯ್ಯ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ರತ್ನ ಜಾಮೀನು ಪ್ರಕ್ರಿಯೆ ಮುಗಿಸಿದ್ದಾರೆ. ಒಂದು ಲಕ್ಷ ರೂ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರು ಶ್ಯೂರಿಟಿ ನೀಡಲು ಒಪ್ಪಿಕೊಂಡಿದ್ದಾರೆ. ಕಾನೂನು ಪ್ರಕ್ರಿಯೆ ಮುಗಿಸಿ ಬೆಳ್ತಂಗಡಿಯಿಂದ ಶಿವಮೊಗ್ಗ ಜೈಲಿನತ್ತ ಮಲ್ಲಿಕಾ ಹಾಗೂ ರತ್ನ ತೆರಳಿದ್ದಾರೆ.
ಇದನ್ನೂ ಓದಿ:-ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು
ನ.೨೪ ರಂದು ೧ ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ ೧೨ ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದರೂ ಚಿನ್ನಯ್ಯನಿಗೆ ಶ್ಯೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರ ಕೊರತೆಯಿಂದ ಬಿಡುಗಡೆಯಾಗದೇ ಚಿನ್ನಯ್ಯ ಜೈಲಿನಲ್ಲಿದ್ದ. ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು. ಅದರ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ೧ ಲಕ್ಷ ರೂ. ಬಾಂಡ್ ಸೇರಿ ೧೨ ಷರತ್ತುಗಳನ್ನು ವಿಧಿಸಿ ನ.೨೪ರಂದು ಜಾಮೀನು ಮಂಜೂರು ಮಾಡಿತ್ತು.
ಆ.೨೩ರಂದು ಸುದೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಸೆ.೬ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…