ರಾಜ್ಯ

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ ಜೈಲಿನಿಂದ ಹೊರ ಬರಲಿದ್ದಾನೆ.

ಬುಧವಾರ ಬೆಳ್ತಂಗಡಿಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದಲ್ಲಿ ಚಿನ್ನಯ್ಯ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ರತ್ನ ಜಾಮೀನು ಪ್ರಕ್ರಿಯೆ ಮುಗಿಸಿದ್ದಾರೆ. ಒಂದು ಲಕ್ಷ ರೂ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರು ಶ್ಯೂರಿಟಿ ನೀಡಲು ಒಪ್ಪಿಕೊಂಡಿದ್ದಾರೆ. ಕಾನೂನು ಪ್ರಕ್ರಿಯೆ ಮುಗಿಸಿ ಬೆಳ್ತಂಗಡಿಯಿಂದ ಶಿವಮೊಗ್ಗ ಜೈಲಿನತ್ತ ಮಲ್ಲಿಕಾ ಹಾಗೂ ರತ್ನ ತೆರಳಿದ್ದಾರೆ.

ಇದನ್ನೂ ಓದಿ:-ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ನ.೨೪ ರಂದು ೧ ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ ೧೨ ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದರೂ ಚಿನ್ನಯ್ಯನಿಗೆ ಶ್ಯೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರ ಕೊರತೆಯಿಂದ ಬಿಡುಗಡೆಯಾಗದೇ ಚಿನ್ನಯ್ಯ ಜೈಲಿನಲ್ಲಿದ್ದ. ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು. ಅದರ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ೧ ಲಕ್ಷ ರೂ. ಬಾಂಡ್ ಸೇರಿ ೧೨ ಷರತ್ತುಗಳನ್ನು ವಿಧಿಸಿ ನ.೨೪ರಂದು ಜಾಮೀನು ಮಂಜೂರು ಮಾಡಿತ್ತು.

ಆ.೨೩ರಂದು ಸುದೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್‌ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಸೆ.೬ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

41 mins ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

45 mins ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

49 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

1 hour ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

2 hours ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

2 hours ago