ರಾಜ್ಯ

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ ಜೈಲಿನಿಂದ ಹೊರ ಬರಲಿದ್ದಾನೆ.

ಬುಧವಾರ ಬೆಳ್ತಂಗಡಿಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದಲ್ಲಿ ಚಿನ್ನಯ್ಯ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ರತ್ನ ಜಾಮೀನು ಪ್ರಕ್ರಿಯೆ ಮುಗಿಸಿದ್ದಾರೆ. ಒಂದು ಲಕ್ಷ ರೂ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರು ಶ್ಯೂರಿಟಿ ನೀಡಲು ಒಪ್ಪಿಕೊಂಡಿದ್ದಾರೆ. ಕಾನೂನು ಪ್ರಕ್ರಿಯೆ ಮುಗಿಸಿ ಬೆಳ್ತಂಗಡಿಯಿಂದ ಶಿವಮೊಗ್ಗ ಜೈಲಿನತ್ತ ಮಲ್ಲಿಕಾ ಹಾಗೂ ರತ್ನ ತೆರಳಿದ್ದಾರೆ.

ಇದನ್ನೂ ಓದಿ:-ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ನ.೨೪ ರಂದು ೧ ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ ೧೨ ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದರೂ ಚಿನ್ನಯ್ಯನಿಗೆ ಶ್ಯೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರ ಕೊರತೆಯಿಂದ ಬಿಡುಗಡೆಯಾಗದೇ ಚಿನ್ನಯ್ಯ ಜೈಲಿನಲ್ಲಿದ್ದ. ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು. ಅದರ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ೧ ಲಕ್ಷ ರೂ. ಬಾಂಡ್ ಸೇರಿ ೧೨ ಷರತ್ತುಗಳನ್ನು ವಿಧಿಸಿ ನ.೨೪ರಂದು ಜಾಮೀನು ಮಂಜೂರು ಮಾಡಿತ್ತು.

ಆ.೨೩ರಂದು ಸುದೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್‌ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಸೆ.೬ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

5 hours ago