ರಾಜ್ಯ

ಧರ್ಮಸ್ಥಳ ಪ್ರಕರಣ | ದೂರುದಾರನಿಗೆ ಇನ್‌ಸ್ಪೆಕ್ಟರ್ ಬೆದರಿಕೆ : ವಕೀಲರ ಆರೋಪ

ಮಂಗಳೂರು: ಧರ್ಮಸ್ಥಳ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಪ್ರಕರಣ ಸಂಬಂಧ ರಚಿಸಲಾಗಿರುವ ಎಸ್‌ಐಟಿ ತಂಡದಲ್ಲಿ ನಿಯೋಜಿಸಿದ್ದ ಇನ್‌ಸ್ಪೆಕ್ಟರ್ ಮಂಜುನಾಥ್ ದೂರುದಾರನಿಗೆ ಬೆದರಿಕೆ ಒಡ್ಡಿದ್ದಾರೆ. ಶವ ಹೂತ ಪ್ರಕರಣದ ದೂರನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿ ನೀನು ಜೈಲು ಪಾಲಾಗುವ ಸಾಧ್ಯತೆ ಇದೆ ಎಂದು ಬೆದರಿಕೆ ಹಾಕಿದ್ದಾರೆಂದು ದೂರುದಾರನ ಪರ ವಕೀಲ ಆರೋಪಿಸಿದ್ದಾರೆ.

ಶುಕ್ರವಾರ ಶೋಧಕಾರ್ಯ ಮುಗಿದ ಬಳಿಕ, ಈ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಎಸ್‌ಐಟಿಗೆ ಒಬ್ಬರು ಅನನ್ಯಾ ಎಂಬವರು ಮೈಲ್ ಮಾಡಿದ್ದರು. ಆದರೆ ದೂರುದಾರನ ಈ ಆರೋಪ ನಿರಾಧಾರ ಎಂದು ಎಸ್‌ಐಟಿ ಅಧಿಕಾರಿಗಳು ತಳ್ಳಿಹಾಕಿದ್ದಾರೆ ಎನ್ನಲಾಗಿದೆ.

ಅನಧಿಕೃತವಾಗಿ ನೂರಾರು ಶವ ಹೂಳಿದ್ದೇನೆ ಎಂದು ದೂರದಾರನ ಹೇಳಿಕೆ ಮೇಲೆ ಎಸ್‌ಐಟಿ 4 ದಿನಗಳ ನೆಲ ಅಗೆಯುವ ಕಾರ್ಯ ಪೂರ್ಣಗೊಳಿಸಿದ್ದು, ಶುಕ್ರವಾರ ಯಾವುದೇ ಕುರುಹು ಸಿಕ್ಕಿಲ್ಲ. ಶನಿವಾರ ಮಳೆ ನಡುವೆಯೇ 9 ನೇ ಪಾಯಿಂಟ್‌ನಲ್ಲಿ ಅಗೆಯುವ ಕೆಲಸ ಆರಂಭ ಆಗಿದೆ. ಇನ್ನು ಇಂದು ತನಿಖಾ ಸ್ಥಳದಲ್ಲಿ ಇನ್‌ಸ್ಪೆಕ್ಟರ್ ಮಂಜುನಾಥ್ ಕೂಡಾ ಕಂಡುಬರಲಿಲ್ಲ. ಹೀಗಾಗಿ ದೂರುದಾರನ ಆರೋಪದ ಬಗ್ಗೆ ಕುತೂಹಲ ಮೂಡಿವೆ.

ಹೆಚ್ಚಿದ ಗೌಪ್ಯತೆ
ಈಗಾಗಲೇ ಎಂಟು ಕಡೆಗಳಲ್ಲಿ ಶೋಧಕಾರ್ಯ ನಡೆಸಲಾಗಿದೆ. 6 ನೇ ಪಾಯಿಂಟ್ ನಲ್ಲಿ ಮಾತ್ರ ಮೂಳೆಗಳು ಸಿಕ್ಕಿದ್ದವು. ಆದರೆ ಉಳಿದ ಯಾವುದೇ ಸ್ಥಳದಲ್ಲಿ ಕುರುಹು ಸಿಕ್ಕಿಲ್ಲ. ಧರ್ಮಸ್ಥಳದ ನೇತ್ರಾವತಿ ತಟದ ದಟ್ಟ ಕಾಡಿನಲ್ಲಿ ಎಸ್‌ಐಟಿ ತಂಡ ಹುಡುಕಾಟ ನಡೆಸುತ್ತಿದೆ. ದೂರದಾರನ ಸಮ್ಮುಖದಲ್ಲೇ ಕಾರ್ಮಿಕರು ಹಾಗೂ ಹಿಟಾಚಿಯಿಂದ ನೆಲ ಅಗೆದು ಅಸ್ತಿಪಂಜರಕ್ಕಾಗಿ ಹುಟುಕಾಟ ನಡೆಸುತ್ತಿದ್ದಾರೆ. ಕಾರ್ಯಾಚರಣೆಯ ಗೌಪ್ಯತೆ ಕಾಪಾಡಲು ಹಸಿರು ಪರದೆ ಕಟ್ಟಿ ಬಂದ್ ಮಾಡಲಾಗುತ್ತಿದೆ. ಸ್ಥಳ 9, ರಸ್ತೆಯ ಪಕ್ಕದಲ್ಲೇ ಇದೆ, ಸಾರ್ವಜನಿಕರು ಹೆಚ್ಚಾಗಿ ಓಡಾಟ ನಡೆಸುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಗೌಪ್ಯತೆ ಕಾಪಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

34 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago