ರಾಜ್ಯ

ಧರ್ಮಸ್ಥಳ ಪ್ರಕರಣ | ದೂರುದಾರನಿಗೆ ಇನ್‌ಸ್ಪೆಕ್ಟರ್ ಬೆದರಿಕೆ : ವಕೀಲರ ಆರೋಪ

ಮಂಗಳೂರು: ಧರ್ಮಸ್ಥಳ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಪ್ರಕರಣ ಸಂಬಂಧ ರಚಿಸಲಾಗಿರುವ ಎಸ್‌ಐಟಿ ತಂಡದಲ್ಲಿ ನಿಯೋಜಿಸಿದ್ದ ಇನ್‌ಸ್ಪೆಕ್ಟರ್ ಮಂಜುನಾಥ್ ದೂರುದಾರನಿಗೆ ಬೆದರಿಕೆ ಒಡ್ಡಿದ್ದಾರೆ. ಶವ ಹೂತ ಪ್ರಕರಣದ ದೂರನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿ ನೀನು ಜೈಲು ಪಾಲಾಗುವ ಸಾಧ್ಯತೆ ಇದೆ ಎಂದು ಬೆದರಿಕೆ ಹಾಕಿದ್ದಾರೆಂದು ದೂರುದಾರನ ಪರ ವಕೀಲ ಆರೋಪಿಸಿದ್ದಾರೆ.

ಶುಕ್ರವಾರ ಶೋಧಕಾರ್ಯ ಮುಗಿದ ಬಳಿಕ, ಈ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಎಸ್‌ಐಟಿಗೆ ಒಬ್ಬರು ಅನನ್ಯಾ ಎಂಬವರು ಮೈಲ್ ಮಾಡಿದ್ದರು. ಆದರೆ ದೂರುದಾರನ ಈ ಆರೋಪ ನಿರಾಧಾರ ಎಂದು ಎಸ್‌ಐಟಿ ಅಧಿಕಾರಿಗಳು ತಳ್ಳಿಹಾಕಿದ್ದಾರೆ ಎನ್ನಲಾಗಿದೆ.

ಅನಧಿಕೃತವಾಗಿ ನೂರಾರು ಶವ ಹೂಳಿದ್ದೇನೆ ಎಂದು ದೂರದಾರನ ಹೇಳಿಕೆ ಮೇಲೆ ಎಸ್‌ಐಟಿ 4 ದಿನಗಳ ನೆಲ ಅಗೆಯುವ ಕಾರ್ಯ ಪೂರ್ಣಗೊಳಿಸಿದ್ದು, ಶುಕ್ರವಾರ ಯಾವುದೇ ಕುರುಹು ಸಿಕ್ಕಿಲ್ಲ. ಶನಿವಾರ ಮಳೆ ನಡುವೆಯೇ 9 ನೇ ಪಾಯಿಂಟ್‌ನಲ್ಲಿ ಅಗೆಯುವ ಕೆಲಸ ಆರಂಭ ಆಗಿದೆ. ಇನ್ನು ಇಂದು ತನಿಖಾ ಸ್ಥಳದಲ್ಲಿ ಇನ್‌ಸ್ಪೆಕ್ಟರ್ ಮಂಜುನಾಥ್ ಕೂಡಾ ಕಂಡುಬರಲಿಲ್ಲ. ಹೀಗಾಗಿ ದೂರುದಾರನ ಆರೋಪದ ಬಗ್ಗೆ ಕುತೂಹಲ ಮೂಡಿವೆ.

ಹೆಚ್ಚಿದ ಗೌಪ್ಯತೆ
ಈಗಾಗಲೇ ಎಂಟು ಕಡೆಗಳಲ್ಲಿ ಶೋಧಕಾರ್ಯ ನಡೆಸಲಾಗಿದೆ. 6 ನೇ ಪಾಯಿಂಟ್ ನಲ್ಲಿ ಮಾತ್ರ ಮೂಳೆಗಳು ಸಿಕ್ಕಿದ್ದವು. ಆದರೆ ಉಳಿದ ಯಾವುದೇ ಸ್ಥಳದಲ್ಲಿ ಕುರುಹು ಸಿಕ್ಕಿಲ್ಲ. ಧರ್ಮಸ್ಥಳದ ನೇತ್ರಾವತಿ ತಟದ ದಟ್ಟ ಕಾಡಿನಲ್ಲಿ ಎಸ್‌ಐಟಿ ತಂಡ ಹುಡುಕಾಟ ನಡೆಸುತ್ತಿದೆ. ದೂರದಾರನ ಸಮ್ಮುಖದಲ್ಲೇ ಕಾರ್ಮಿಕರು ಹಾಗೂ ಹಿಟಾಚಿಯಿಂದ ನೆಲ ಅಗೆದು ಅಸ್ತಿಪಂಜರಕ್ಕಾಗಿ ಹುಟುಕಾಟ ನಡೆಸುತ್ತಿದ್ದಾರೆ. ಕಾರ್ಯಾಚರಣೆಯ ಗೌಪ್ಯತೆ ಕಾಪಾಡಲು ಹಸಿರು ಪರದೆ ಕಟ್ಟಿ ಬಂದ್ ಮಾಡಲಾಗುತ್ತಿದೆ. ಸ್ಥಳ 9, ರಸ್ತೆಯ ಪಕ್ಕದಲ್ಲೇ ಇದೆ, ಸಾರ್ವಜನಿಕರು ಹೆಚ್ಚಾಗಿ ಓಡಾಟ ನಡೆಸುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಗೌಪ್ಯತೆ ಕಾಪಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

45 mins ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

4 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

6 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

17 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

19 hours ago