ರಾಜ್ಯ

ಧರ್ಮಸ್ಥಳ ಪ್ರಕರಣ | ದೂರುದಾರನಿಗೆ ಇನ್‌ಸ್ಪೆಕ್ಟರ್ ಬೆದರಿಕೆ : ವಕೀಲರ ಆರೋಪ

ಮಂಗಳೂರು: ಧರ್ಮಸ್ಥಳ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಪ್ರಕರಣ ಸಂಬಂಧ ರಚಿಸಲಾಗಿರುವ ಎಸ್‌ಐಟಿ ತಂಡದಲ್ಲಿ ನಿಯೋಜಿಸಿದ್ದ ಇನ್‌ಸ್ಪೆಕ್ಟರ್ ಮಂಜುನಾಥ್ ದೂರುದಾರನಿಗೆ ಬೆದರಿಕೆ ಒಡ್ಡಿದ್ದಾರೆ. ಶವ ಹೂತ ಪ್ರಕರಣದ ದೂರನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿ ನೀನು ಜೈಲು ಪಾಲಾಗುವ ಸಾಧ್ಯತೆ ಇದೆ ಎಂದು ಬೆದರಿಕೆ ಹಾಕಿದ್ದಾರೆಂದು ದೂರುದಾರನ ಪರ ವಕೀಲ ಆರೋಪಿಸಿದ್ದಾರೆ.

ಶುಕ್ರವಾರ ಶೋಧಕಾರ್ಯ ಮುಗಿದ ಬಳಿಕ, ಈ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಎಸ್‌ಐಟಿಗೆ ಒಬ್ಬರು ಅನನ್ಯಾ ಎಂಬವರು ಮೈಲ್ ಮಾಡಿದ್ದರು. ಆದರೆ ದೂರುದಾರನ ಈ ಆರೋಪ ನಿರಾಧಾರ ಎಂದು ಎಸ್‌ಐಟಿ ಅಧಿಕಾರಿಗಳು ತಳ್ಳಿಹಾಕಿದ್ದಾರೆ ಎನ್ನಲಾಗಿದೆ.

ಅನಧಿಕೃತವಾಗಿ ನೂರಾರು ಶವ ಹೂಳಿದ್ದೇನೆ ಎಂದು ದೂರದಾರನ ಹೇಳಿಕೆ ಮೇಲೆ ಎಸ್‌ಐಟಿ 4 ದಿನಗಳ ನೆಲ ಅಗೆಯುವ ಕಾರ್ಯ ಪೂರ್ಣಗೊಳಿಸಿದ್ದು, ಶುಕ್ರವಾರ ಯಾವುದೇ ಕುರುಹು ಸಿಕ್ಕಿಲ್ಲ. ಶನಿವಾರ ಮಳೆ ನಡುವೆಯೇ 9 ನೇ ಪಾಯಿಂಟ್‌ನಲ್ಲಿ ಅಗೆಯುವ ಕೆಲಸ ಆರಂಭ ಆಗಿದೆ. ಇನ್ನು ಇಂದು ತನಿಖಾ ಸ್ಥಳದಲ್ಲಿ ಇನ್‌ಸ್ಪೆಕ್ಟರ್ ಮಂಜುನಾಥ್ ಕೂಡಾ ಕಂಡುಬರಲಿಲ್ಲ. ಹೀಗಾಗಿ ದೂರುದಾರನ ಆರೋಪದ ಬಗ್ಗೆ ಕುತೂಹಲ ಮೂಡಿವೆ.

ಹೆಚ್ಚಿದ ಗೌಪ್ಯತೆ
ಈಗಾಗಲೇ ಎಂಟು ಕಡೆಗಳಲ್ಲಿ ಶೋಧಕಾರ್ಯ ನಡೆಸಲಾಗಿದೆ. 6 ನೇ ಪಾಯಿಂಟ್ ನಲ್ಲಿ ಮಾತ್ರ ಮೂಳೆಗಳು ಸಿಕ್ಕಿದ್ದವು. ಆದರೆ ಉಳಿದ ಯಾವುದೇ ಸ್ಥಳದಲ್ಲಿ ಕುರುಹು ಸಿಕ್ಕಿಲ್ಲ. ಧರ್ಮಸ್ಥಳದ ನೇತ್ರಾವತಿ ತಟದ ದಟ್ಟ ಕಾಡಿನಲ್ಲಿ ಎಸ್‌ಐಟಿ ತಂಡ ಹುಡುಕಾಟ ನಡೆಸುತ್ತಿದೆ. ದೂರದಾರನ ಸಮ್ಮುಖದಲ್ಲೇ ಕಾರ್ಮಿಕರು ಹಾಗೂ ಹಿಟಾಚಿಯಿಂದ ನೆಲ ಅಗೆದು ಅಸ್ತಿಪಂಜರಕ್ಕಾಗಿ ಹುಟುಕಾಟ ನಡೆಸುತ್ತಿದ್ದಾರೆ. ಕಾರ್ಯಾಚರಣೆಯ ಗೌಪ್ಯತೆ ಕಾಪಾಡಲು ಹಸಿರು ಪರದೆ ಕಟ್ಟಿ ಬಂದ್ ಮಾಡಲಾಗುತ್ತಿದೆ. ಸ್ಥಳ 9, ರಸ್ತೆಯ ಪಕ್ಕದಲ್ಲೇ ಇದೆ, ಸಾರ್ವಜನಿಕರು ಹೆಚ್ಚಾಗಿ ಓಡಾಟ ನಡೆಸುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಗೌಪ್ಯತೆ ಕಾಪಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

7 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

13 hours ago