It’s been two and a half years without grants for MLAs: MP Basavaraj Bommai mocks
ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಎಸ್ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್ಐಟಿ ತನಿಖೆಯಾಗಬೇಕು.
ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲೀಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ, ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು.
ಇನ್ನು ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬರುವ ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆ ಆಗುತ್ತದೆ. ಯಾರು ಏನೇ ಹೇಳಿದರು. ಆಗುವ ಬೆಳವಣಿಗೆಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಇದೇ ವೇಳೆ ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಅವರು ಒಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಒಟ್ಟು ಗೂಡಿಸುವ ಅಗತ್ಯವಿಲ್ಲ. ಅವರು ಮೊದಲಿನಿಂದಲೂ ಒಟ್ಟಾಗಿದ್ದಾರೆ. ರಾಜಕೀಯಕ್ಕೆ ಬರುವ ಮುಂಚಿನಿಂದಲೂ ಅವರ ಸ್ನೇಹ ಗಾಢವಾಗಿದೆ ಎಂದರು.
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…
ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…