ರಾಜ್ಯ

ಧರ್ಮಸ್ಥಳ ಕೇಸ್: ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಸಬಾರದು ಎಂದ ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್‌ಐಟಿ ತನಿಖೆಯಾಗಬೇಕು.
ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲೀಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ‌ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ, ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು.

ಇನ್ನು ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬರುವ ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆ ಆಗುತ್ತದೆ. ಯಾರು ಏನೇ ಹೇಳಿದರು. ಆಗುವ ಬೆಳವಣಿಗೆಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಇದೇ ವೇಳೆ ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಅವರು ಒಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಒಟ್ಟು ಗೂಡಿಸುವ ಅಗತ್ಯವಿಲ್ಲ. ಅವರು ಮೊದಲಿನಿಂದಲೂ ಒಟ್ಟಾಗಿದ್ದಾರೆ. ರಾಜಕೀಯಕ್ಕೆ ಬರುವ ಮುಂಚಿನಿಂದಲೂ ಅವರ ಸ್ನೇಹ ಗಾಢವಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago