ರಾಜ್ಯ

ಧರ್ಮಸ್ಥಳ ಪ್ರಕರಣ | ಎನ್‌ಐಎ ತನಿಖೆಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು : ದೂರುದಾರನ ಹಿನ್ನೆಲೆ ಪರಿಶೀಲಿಸದೆ ಎಸ್‌ಐಟಿ ರಚಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಪ್ಪು. ಇದರ ಹಿಂದೆ ಇರುವವರನ್ನು ಬಯಲಿಗೆಳೆಯಲು ಈಗ ಸರ್ಕಾರ ಎಸ್‌ಐಟಿ ರಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸುಕುಧಾರಿಗಿಂತಲೂ ಆತನ ಹಿಂದೆ ಇರುವವರನ್ನು ಪತ್ತೆ ಮಾಡಬೇಕಿದೆ. ಇದಕ್ಕೆ ವಿದೇಶದಿಂದ ಹಣ ಬಂದಿರುವ ಸಾಧ್ಯತೆ ಇದೆ. ಆದ್ದರಿಂದ ಇದನ್ನು ಎನ್‌ಐಎ ತನಿಖೆಗೆ ನೀಡುವುದು ಸೂಕ್ತ. ಇಲ್ಲವಾದರೆ ಕಾಂಗ್ರೆಸ್‌ ಕೂಡ ಇವರ ಜೊತೆ ಸೇರಿಕೊಂಡಿದ್ದಾರೆ ಎಂದು ಅಂದುಕೊಳ್ಳಬೇಕು. ಲವ್‌ ಜಿಹಾದ್‌ನಂತೆಯೇ ಇದು ಮತಾಂತರದ ಜಿಹಾದ್‌ ಆಗಿದೆ. ಇದರ ಹಿಂದೆ ಯಾವ ದೇಶದವರು ಇದ್ದಾರೆ ಎಂದು ಕೂಡ ತಿಳಿಯಬೇಕಿದೆ ಎಂದರು.

ಪಕ್ಕದ ರಾಜ್ಯ ತಮಿಳುನಾಡಿನವರು ಹಿಂದೂ ದೇವರ ಫೋಟೋ ಸುಡುತ್ತಾರೆ. ಅಲ್ಲಿರುವವರೂ ಇಲ್ಲಿ ಸೇರಿಕೊಂಡಿರಬಹುದು. ಕೇರಳ ಸರ್ಕಾರವಂತೂ ಈ ಬಗ್ಗೆ ನಿರ್ಣಯ ಕೈಗೊಂಡಿದ್ದು ಆ ಬಗ್ಗೆ ನಾಚಿಕೆಯಾಗಬೇಕು. ಒಬ್ಬ ಮುಸ್ಲಿಂ ಯೂಟ್ಯೂಬರ್‌ ದಿಢೀರನೆ ಬಂದು ವೀಡಿಯೋ ಮಾಡಿ ಅಪಪ್ರಚಾರ ಮಾಡಿದ್ದಾನೆ. ಆತನೇನೂ ಜ್ಞಾನಿಯಲ್ಲ. ಆತನನ್ನು ಮೊದಲು ಬಂಧಿಸಬೇಕು. ಆತ ಜಾಮೀನು ಕೂಡ ಪಡೆದುಕೊಂಡಿದ್ದಾನೆ. ಆದ್ದರಿಂದ ಪೊಲೀಸರು ಮೇಲ್ಮನವಿ ಸಲ್ಲಿಸಿ ಬಂಧಿಸುವ ಅವಕಾಶ ಪಡೆಯಬೇಕು ಎಂದು ಒತ್ತಾಯಿಸಿದರು.

ಧರ್ಮಸ್ಥಳದ ಪ್ರಕರಣ ಆರಂಭವಾದಾಗಿನಿಂದಲೂ ಷಡ್ಯಂತ್ರ ಇದೆ ಎಂದು ಹೇಳುತ್ತಲೇ ಇದ್ದೆ. ಈ ಮುಸುಕುಧಾರಿಯ ಹಿನ್ನೆಲೆಯನ್ನು ಕಾಂಗ್ರೆಸ್‌ ಸರ್ಕಾರ ಮೊದಲು ತಿಳಿದುಕೊಳ್ಳಬೇಕಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಗತಿಪರರ ಮಾತನ್ನು ಕೇಳಿಕೊಂಡು ಎಸ್‌ಐಟಿ ರಚಿಸಿ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಇದರಿಂದ ಅನೇಕ ಭಕ್ತರು ಅನುಭವಿಸಿದ ನೋವನ್ನು ಶಮನಗೊಳಿಸಲು ಸಾಧ್ಯವಿಲ್ಲ. ಎಸ್‌ಐಟಿ ರಚಿಸಿ ಎಂದು ಅನೇಕ ಮನವಿಗಳು ಬರುತ್ತಲೇ ಇರುತ್ತದೆ. ಏನೇ ಮಾಡುವ ಮೊದಲು ಹಿನ್ನೆಲೆಯನ್ನು ಪರಿಶೀಲಿಸಬೇಕಿತ್ತು. ಎಸ್‌ಐಟಿ ರಚಿಸಿರುವುದರಿಂದ ಸರ್ಕಾರದ್ದೇ ತಪ್ಪು ಎಂಬುದು ಸಾಬೀತಾಗಿದೆ ಎಂದರು.

ಸುಜಾತ ಭಟ್‌ ಹೇಳಿದ್ದೆಲ್ಲ ಸುಳ್ಳು ಎಂದು ಒಪ್ಪಿಕೊಂಡಿದ್ದಾರೆ. ಸುಜಾತ ಭಟ್‌ ದೂರು ನೀಡಿದಾಗಲೇ ಅವರ ಹಿನ್ನೆಲೆ ಪರಿಶೀಲಿಸಿದ್ದರೆ ಸತ್ಯ ಗೊತ್ತಾಗುತ್ತಿತ್ತು. ಇವೆಲ್ಲದರ ಹಿಂದೆ ಸಮೀರ್‌ ಎಂಬ ಯುವಕ ಇದ್ದಾನೆ. ಈತನ ಜೊತೆಗೆ ಪ್ರಗತಿಪರರು ಸೇರಿಕೊಂಡಿದ್ದಾರೆ. ಇವರೆಲ್ಲರೂ ಮುಸುಕುಧಾರಿಯನ್ನು ಹಿಡಿದುಕೊಂಡು ಬಂದಿದ್ದಾರೆ. ಈ ರೀತಿ ದೂರು ಕೊಡುವವರಿಗೆ ಪೊಲೀಸರು ಎಕೆ-47 ಹಿಡಿದುಕೊಂಡು ಭದ್ರತೆ ನೀಡಿದ್ದಾರೆ. ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿಗೆ ಅಪಮಾನ ಮಾಡಬೇಕು, ಮತಾಂತರ ಮಾಡಬೇಕೆಂಬ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಸಮೀರ್‌ ಒಬ್ಬ ಮುಸ್ಲಿಂ ಆಗಿದ್ದು, ಆತನಿಗೆ ಏಕೆ ಇದರಲ್ಲಿ ಆಸಕ್ತಿ? ಅನೇಕ ಮಸೀದಿಗಳ ಮೇಲೆ ದೂರು ಬಂದಿದ್ದರೂ, ಯಾವುದೇ ಮಸೀದಿಯ ಬಳಿ ನೆಲ ಅಗೆದಿಲ್ಲ ಎಂದರು.

ಇಷ್ಟೆಲ್ಲ ಅವಾಂತರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ. ಪೊಲೀಸರು ನಿತ್ಯದ ಕೆಲಸ ಬಿಟ್ಟು ಹೆಚ್ಚುವರಿ ಕೆಲಸ ಮಾಡಿದ್ದು, ಅದರಿಂದಾದ ಹಣದ ನಷ್ಟವನ್ನು ಕಾಂಗ್ರೆಸ್‌ ಪಕ್ಷ ಭರಿಸಬೇಕು. ರಾಜ್ಯದ ಇತಿಹಾಸದಲ್ಲಿ ಈ ಬಗೆಯ ಪ್ರಹಸನ ನಡೆದಿಲ್ಲ. ಯಾರೋ ಒಬ್ಬ ದಾರಿಹೋಕ ಹೇಳಿದ್ದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿರುವ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗಿದೆ. ಎಸ್‌ಐಟಿ ರಚನೆಯಾದಾಗಲೇ ನಾನು ಪತ್ರಿಕಾಗೋಷ್ಠಿ ಮಾಡಿ ಹಿನ್ನೆಲೆ ಪರಿಶೀಲಿಸಲು ಆಗ್ರಹಿಸಿದ್ದೆ. ಬಿಜೆಪಿ ಬೀದಿಗಿಳಿದು ಹೋರಾಟ ಮಾಡಿರಲಿಲ್ಲ ಎಂದಾದರೆ ಯಾವುದೋ ಬುರುಡೆ ತಂದು ವಂಚಿಸುತ್ತಿದ್ದರು. ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ನಾಯಕರು ಹಿಂದೂಗಳ ಪರವಾಗಿದ್ದೇವೆ ಎಂದು ತೋರಿಸಿಕೊಳ್ಳುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

2 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

25 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

39 mins ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

51 mins ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

2 hours ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

2 hours ago