ರಾಜ್ಯ

ಧರ್ಮಸ್ಥಳ ಪ್ರಕರಣ | ಗುರುತಿನ ಚೀಟಿ, ಹರಿದ ರವಿಕೆ ಪತ್ತೆ ; ಮುಂದುವರೆದ ಉತ್ಖನನ

ಮಂಗಳೂರು : ಹಲವು ಮೃತದೇಹ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಇಂದು ಮುಂದುವರೆದಿದ್ದು, ನಾಲ್ಕನೇ ಸ್ಥಳವನ್ನು ಉತ್ಖನನ ಮಾಡಲಾಗಿದೆ. ಯಾವುದೇ ಅಸ್ಥಿಪಂಜರ ದೊರಕಿಲ್ಲ. ಆದರೆ, ಎರಡು ಕಾರ್ಡ್‌ ಮತ್ತು ಹರಿದ ರವಿಕೆ ಪತ್ತೆಯಾಗಿವೆ.

ಒಂದನೇ ಸ್ಥಳದ ಎರಡು ID ಕಾರ್ಡ್‌ಗಳು ಲಭ್ಯವಾಗಿದ್ದವು ಎಂಬ ಸ್ಫೋಟಕ ವಿಚಾರವನ್ನು ವಕೀಲರೊಬ್ಬರು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ಅನನ್ಯ ಭಟ್‌ ಎಂಬುವರ ತಾಯಿ ಸುಜಾತ ಭಟ್ ಪರ ವಕೀಲ ಮಂಜುನಾಥ್ ಅವರ ಪತ್ರಿಕಾ ಪ್ರಕಟಣೆ ಹೊರಡಿಸಿ, ಈ ವಿಚಾರ ತಿಳಿಸಿದ್ದಾರೆ.

ಸದ್ಯ ಅದು ವೈರಲ್ ಆಗಿದೆ. ಪಾಯಿಂಟ್ ನಂಬರ್ 1ರಲ್ಲಿ ಕೆಂಪು ಬ್ಲೌಸ್‌, ಪ್ಯಾನ್‌ಕಾರ್ಡ್, ಎಟಿಎಂ ಕಾರ್ಡ್‌ ಪತ್ತೆಯಾಗಿದೆ ಎಂದು ವಕೀಲ ಮಂಜುನಾಥ್ ಹೊರಡಿಸಿರುವ ಪತ್ರಿಕಾ ಪ್ರಕಟಣೆ ಭಾರೀ ಕುತೂಹಲ ಸೃಷ್ಟಿಸಿದೆ. ಸದ್ಯ, ಅಗೆಯುವ ಸಂದರ್ಭದಲ್ಲಿ ಲಭ್ಯವಾದ ಈ ಐಡಿ ಕಾರ್ಡ್‌ಗಳ ಕುರಿತು ಎಸ್‌ಐಟಿ ತಂಡ ತನಿಖೆ ಚುರುಕುಗೊಳಿಸಿದೆ.

ಗುರುತಿಸಬಹುದಾದ ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್‌ಗಳ ಪತ್ತೆ (ಒಂದರಲ್ಲಿ ಪುರುಷರ ಹೆಸರು, ಮತ್ತೊಂದರಲ್ಲಿ ಮಹಿಳೆಯ ಹೆಸರು “ಲಕ್ಷ್ಮಿ”) ಮುಂದಿನ ತನಿಖೆಗೆ ಹೊಸ ದಾರಿಯನ್ನು ಒದಗಿಸುತ್ತದೆ. ನಾವು SIT ಈ ಪ್ರಮುಖ ಸುಳಿವುಗಳನ್ನು ಗಂಭೀರವಾಗಿ ಹಾಗೂ ತ್ವರಿತವಾಗಿ ಅನುಸರಿಸುವುದಾಗಿ ನಂಬಿದ್ದೇವೆ ಅಂತ ವಕೀಲ ಮಂಜುನಾಥ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೇಳಿಕೆಯಲ್ಲಿ ಏನಿದೆ?: ಸೈಟ್ ಸಂಖ್ಯೆ 1 ರಲ್ಲಿ ಸುಮಾರು 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿದೆ. ಒಂದು ಕಾರ್ಡ್‌ನಲ್ಲಿ ಪುರುಷನ ಹೆಸರು ಇದ್ದರೆ ಇನ್ನೊಂದು ಕಾರ್ಡ್‌ನಲ್ಲಿ ಲಕ್ಷ್ಮಿ ಎಂಬ ಮಹಿಳೆಯ ಹೆಸರು ಇದೆ. ಸಾಕ್ಷ್ಯಗಳು ಸಿಕ್ಕಿದ ಕಾರಣ ನಮಗೆ ಹೊಸ ಭರವಸೆ ಮೂಡಿದೆ. ನಾವು ಎಸ್‌ಐಟಿ ಅವರ ಕೆಲಸದಲ್ಲಿ ಸಂಪೂರ್ಣ ನಂಬಿಕೆ ಇಟ್ಟಿದ್ದೇವೆ. ವಿಶೇಷ ತನಿಖಾ ತಂಡ ಶ್ಲಾಘನೀಯ ಕೆಲಸ ಮಾಡುತ್ತಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

3 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

4 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

4 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

5 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

6 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

10 hours ago