ರಾಜ್ಯ

ಧರ್ಮಸ್ಥಳ ಪ್ರಕರಣ | ಗುರುತಿನ ಚೀಟಿ, ಹರಿದ ರವಿಕೆ ಪತ್ತೆ ; ಮುಂದುವರೆದ ಉತ್ಖನನ

ಮಂಗಳೂರು : ಹಲವು ಮೃತದೇಹ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಇಂದು ಮುಂದುವರೆದಿದ್ದು, ನಾಲ್ಕನೇ ಸ್ಥಳವನ್ನು ಉತ್ಖನನ ಮಾಡಲಾಗಿದೆ. ಯಾವುದೇ ಅಸ್ಥಿಪಂಜರ ದೊರಕಿಲ್ಲ. ಆದರೆ, ಎರಡು ಕಾರ್ಡ್‌ ಮತ್ತು ಹರಿದ ರವಿಕೆ ಪತ್ತೆಯಾಗಿವೆ.

ಒಂದನೇ ಸ್ಥಳದ ಎರಡು ID ಕಾರ್ಡ್‌ಗಳು ಲಭ್ಯವಾಗಿದ್ದವು ಎಂಬ ಸ್ಫೋಟಕ ವಿಚಾರವನ್ನು ವಕೀಲರೊಬ್ಬರು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ಅನನ್ಯ ಭಟ್‌ ಎಂಬುವರ ತಾಯಿ ಸುಜಾತ ಭಟ್ ಪರ ವಕೀಲ ಮಂಜುನಾಥ್ ಅವರ ಪತ್ರಿಕಾ ಪ್ರಕಟಣೆ ಹೊರಡಿಸಿ, ಈ ವಿಚಾರ ತಿಳಿಸಿದ್ದಾರೆ.

ಸದ್ಯ ಅದು ವೈರಲ್ ಆಗಿದೆ. ಪಾಯಿಂಟ್ ನಂಬರ್ 1ರಲ್ಲಿ ಕೆಂಪು ಬ್ಲೌಸ್‌, ಪ್ಯಾನ್‌ಕಾರ್ಡ್, ಎಟಿಎಂ ಕಾರ್ಡ್‌ ಪತ್ತೆಯಾಗಿದೆ ಎಂದು ವಕೀಲ ಮಂಜುನಾಥ್ ಹೊರಡಿಸಿರುವ ಪತ್ರಿಕಾ ಪ್ರಕಟಣೆ ಭಾರೀ ಕುತೂಹಲ ಸೃಷ್ಟಿಸಿದೆ. ಸದ್ಯ, ಅಗೆಯುವ ಸಂದರ್ಭದಲ್ಲಿ ಲಭ್ಯವಾದ ಈ ಐಡಿ ಕಾರ್ಡ್‌ಗಳ ಕುರಿತು ಎಸ್‌ಐಟಿ ತಂಡ ತನಿಖೆ ಚುರುಕುಗೊಳಿಸಿದೆ.

ಗುರುತಿಸಬಹುದಾದ ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್‌ಗಳ ಪತ್ತೆ (ಒಂದರಲ್ಲಿ ಪುರುಷರ ಹೆಸರು, ಮತ್ತೊಂದರಲ್ಲಿ ಮಹಿಳೆಯ ಹೆಸರು “ಲಕ್ಷ್ಮಿ”) ಮುಂದಿನ ತನಿಖೆಗೆ ಹೊಸ ದಾರಿಯನ್ನು ಒದಗಿಸುತ್ತದೆ. ನಾವು SIT ಈ ಪ್ರಮುಖ ಸುಳಿವುಗಳನ್ನು ಗಂಭೀರವಾಗಿ ಹಾಗೂ ತ್ವರಿತವಾಗಿ ಅನುಸರಿಸುವುದಾಗಿ ನಂಬಿದ್ದೇವೆ ಅಂತ ವಕೀಲ ಮಂಜುನಾಥ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೇಳಿಕೆಯಲ್ಲಿ ಏನಿದೆ?: ಸೈಟ್ ಸಂಖ್ಯೆ 1 ರಲ್ಲಿ ಸುಮಾರು 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ಪತ್ತೆಯಾಗಿದೆ. ಒಂದು ಕಾರ್ಡ್‌ನಲ್ಲಿ ಪುರುಷನ ಹೆಸರು ಇದ್ದರೆ ಇನ್ನೊಂದು ಕಾರ್ಡ್‌ನಲ್ಲಿ ಲಕ್ಷ್ಮಿ ಎಂಬ ಮಹಿಳೆಯ ಹೆಸರು ಇದೆ. ಸಾಕ್ಷ್ಯಗಳು ಸಿಕ್ಕಿದ ಕಾರಣ ನಮಗೆ ಹೊಸ ಭರವಸೆ ಮೂಡಿದೆ. ನಾವು ಎಸ್‌ಐಟಿ ಅವರ ಕೆಲಸದಲ್ಲಿ ಸಂಪೂರ್ಣ ನಂಬಿಕೆ ಇಟ್ಟಿದ್ದೇವೆ. ವಿಶೇಷ ತನಿಖಾ ತಂಡ ಶ್ಲಾಘನೀಯ ಕೆಲಸ ಮಾಡುತ್ತಿದೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

5 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

5 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

10 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

10 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

10 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

10 hours ago