ರಾಜ್ಯ

ಧರ್ಮಸ್ಥಳ ಪ್ರಕರಣ: ಮುಸುಕುಧಾರಿಯ ಮುಸುಕು ತೆಗೆಯಿರಿ: ಬಿಜೆಪಿ ಆಗ್ರಹ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಮುಸುಕುಧಾರಿಯ ಮುಸುಕು ತೆಗೆಯಿರಿ ಎಂದು ಬಿಜೆಪಿ ಆಗ್ರಹಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ಪಕ್ಷ, ಧರ್ಮಸ್ಥಳ, ಪುಣ್ಯಸ್ಥಳ, ಪವಿತ್ರ ಸ್ಥಳಕ್ಕೆ ಆವರಿಸಿರುವ ಕಾರ್ಮೋಡವನ್ನು ಸರಿಸಲು ಕಾಂಗ್ರೆಸ್‌ ಸರ್ಕಾರ ಪ್ರಾಮಾಣಿಕ ಹೆಜ್ಜೆಯಿರಿಸಬೇಕಾಗಿದೆ. ಮುಸುಕು ಹಾಕಿಕೊಂಡಿರುವ ಅನಾಮಿಕನ ಮೇಲೆ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಿದರೆ ನಗರ ನಕ್ಸಲರ ಕೈವಾಡ ಬಯಲಾಗಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಅವರು ಅನಾಮಿಕ ದೂರು ನೀಡಿದ ಕೂಡಲೇ ಅಮಾನಿಕನನ್ನೇ ಬ್ರೈನ್‌ ಮ್ಯಾಪಿಂಗ್‌ ಮಾಡಲು ಉದ್ದೇಶಿಸಿದ್ದೂ ಸರ್ಕಾರ ಎಡಪಂಥೀಯರ ಒತ್ತಡಕ್ಕೆ ಮಣಿದು ಸಿಎಂ ಸಿದ್ದರಾಮಯ್ಯ ಅವರು ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಬ್ರೈನ್‌ ಮ್ಯಾಪಿಂಗ್‌ ಆಗದಂತೆ ನೋಡಿಕೊಂಡ ಪರಿಣಾಮ ಇಂದು ಪುಣ್ಯಕ್ಷೇತ್ರವೊಂದರ ಬಗ್ಗೆ ಅಪಪ್ರಚಾರ ನಡೆಯುತ್ತಿದೆ.

ಸರ್ಕಾರ ಕೇವಲ ಅನಾಮಿಕನ ಹಿಂದೆ ಬೀಳದೇ ಧರ್ಮಸ್ಥಳದ ವಿರುದ್ಧ ಪಿತೂರಿ ನಡೆಸುತ್ತಿರುವ ಎಲ್ಲರನ್ನೂ ಬಂಧಿಸಿ ತನಿಖೆ ನಡೆಸಬೇಕು. ನಂಬಿಕೆ ಹಾಳುಗೆಡಹುವ ದುಷ್ಟ ಶಕ್ತಿಗಳ ವಿರುದ್ಧ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ಬಿಜೆಪಿ ಬೆಂಬಲಿಸಲಿದೆ ಹಾಗೂ ಯಾವುದೇ ಕ್ರಮಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಕ್ಕೂ ಬಿಜೆಪಿ ಬದ್ಧವಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago