ರಾಜ್ಯ

ಧರ್ಮಸ್ಥಳ ಪ್ರಕರಣ | ಎಸ್‌ಐಟಿಗೆ 20 ಅಧಿಕಾರಿಗಳ ಬಲ

ಬೆಂಗಳೂರು : ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮೂಹಿಕ ಅಸಹಜ ಸಾವು ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತಂಡಕ್ಕೆ ಇನ್ನೂ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಿದೆ. ವ್ಯಾಪಕ ಸಾರ್ವಜನಿಕ ಆಕೋಶಕ್ಕೆ ಕಾರಣವಾಗಿರುವ ಗೊಂದಲದ ಆರೋಪಗಳ ಬಗ್ಗೆ ಈ ತಂಡವು ಸಮಗ್ರ ತನಿಖೆ ನಡೆಸಲಿದೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅಸಹಜ ಸಾವುಗಳ ಕುರಿತಾಗಿ ಕೇಳಿ ಬಂದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಇದರ ಸದಸ್ಯರಾಗಿದ್ದಾರೆ.

ಈ ತಂಡಕ್ಕೆ ಇದೀಗ 1 ಎಸ್ಪಿ, 2 ಡಿಎಸ್ಪಿ, 4 ಪೊಲೀಸ್ ಇನ್‌ಸ್ಪೆಕ್ಟರ್, 1 ಸಿಪಿಐ, 7 ಪಿಎಸ್‌ಐ, 1 ಎಎಸ್‌ಐ ಮತ್ತು 4 ಮುಖ್ಯ ಪೇದೆಗಳನ್ನು ನಿಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಂದ ಆಯ್ಕೆಯಾದ ಈ ಅಧಿಕಾರಿಗಳು ಡಿಸಿಆರ್, ಕರಾವಳಿ ಭದ್ರತಾ ಪೊಲೀಸ್, ಮೆಸ್ಕಾಂ ಮತ್ತು ಎಫ್‌ಎಂಎಸ್ ವಿಭಾಗಗಳಿಂದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಅವರಿಂದ ಈ ತಂಡಕ್ಕೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ತನಿಖೆಯ ಪ್ರಗತಿಯನ್ನು ನಿಯಮಿತವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ವರದಿಯಾಗಿ ಸಲ್ಲಿಸಲಾಗುವುದು. ಈ ತಂಡವು ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಪ್ರಕರಣದ ವಿವರಗಳನ್ನು ಸಂಗ್ರಹಿಸಿ, ಸ್ಥಳ ಪರಿಶೀಲನೆ, ಸಾಕ್ಷಿಗಳ ವಿಚಾರಣೆ ಮತ್ತು ಅಸ್ಥಿಪಂಜರಗಳ ಡಿಎನ್‌ಎ ಪರೀಕ್ಷೆಯನ್ನು ನಡೆಸಲಿದೆ.

ಎಸ್‌ಐಟಿ ತಂಡವು ಈಗ ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶವಗಳ ದಫನ್ ಸ್ಥಳಗಳನ್ನು ಗುರುತಿಸಲು ಮತ್ತು ಅಸ್ಥಿಪಂಜರಗಳ ವೈದ್ಯಕೀಯ ಪರೀಕ್ಷೆಯನ್ನು ನಡೆಸಲು ಕಾರ್ಯಪ್ರವೃತ್ತವಾಗಿದೆ. ಪೊಲೀಸ್ ದಾಖಲೆಗಳ ಜೊತೆಗೆ, ಸಾಕ್ಷಿಗಳ ಹೇಳಿಕೆ ಮತ್ತು ಸ್ಥಳೀಯರ ಸಹಕಾರದೊಂದಿಗೆ ಈ ಪ್ರಕರಣವನ್ನು ಭೇದಿಸಲು ಕೆದಕಲು ತಂಡವು ಸಿದ್ಧತೆ ನಡೆಸಿದೆ. ಈ ತನಿಖೆಯ ಫಲಿತಾಂಶವು ಈ ಗಂಭೀರ ಆರೋಪಗಳ ಸತ್ಯಾಸತ್ಯತೆಯನ್ನು ಬೆಳಕಿಗೆ ತರಲಿದೆ ಎಂಬ ನಿರೀಕ್ಷೆಯಿದೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

6 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

6 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

8 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

8 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

8 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

9 hours ago