ರಾಜ್ಯ

ಧರ್ಮಸ್ಥಳ ಪ್ರಕರಣ | ಎಸ್‌ಐಟಿಗೆ 20 ಅಧಿಕಾರಿಗಳ ಬಲ

ಬೆಂಗಳೂರು : ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮೂಹಿಕ ಅಸಹಜ ಸಾವು ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತಂಡಕ್ಕೆ ಇನ್ನೂ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಿದೆ. ವ್ಯಾಪಕ ಸಾರ್ವಜನಿಕ ಆಕೋಶಕ್ಕೆ ಕಾರಣವಾಗಿರುವ ಗೊಂದಲದ ಆರೋಪಗಳ ಬಗ್ಗೆ ಈ ತಂಡವು ಸಮಗ್ರ ತನಿಖೆ ನಡೆಸಲಿದೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅಸಹಜ ಸಾವುಗಳ ಕುರಿತಾಗಿ ಕೇಳಿ ಬಂದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಇದರ ಸದಸ್ಯರಾಗಿದ್ದಾರೆ.

ಈ ತಂಡಕ್ಕೆ ಇದೀಗ 1 ಎಸ್ಪಿ, 2 ಡಿಎಸ್ಪಿ, 4 ಪೊಲೀಸ್ ಇನ್‌ಸ್ಪೆಕ್ಟರ್, 1 ಸಿಪಿಐ, 7 ಪಿಎಸ್‌ಐ, 1 ಎಎಸ್‌ಐ ಮತ್ತು 4 ಮುಖ್ಯ ಪೇದೆಗಳನ್ನು ನಿಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಂದ ಆಯ್ಕೆಯಾದ ಈ ಅಧಿಕಾರಿಗಳು ಡಿಸಿಆರ್, ಕರಾವಳಿ ಭದ್ರತಾ ಪೊಲೀಸ್, ಮೆಸ್ಕಾಂ ಮತ್ತು ಎಫ್‌ಎಂಎಸ್ ವಿಭಾಗಗಳಿಂದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಅವರಿಂದ ಈ ತಂಡಕ್ಕೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ತನಿಖೆಯ ಪ್ರಗತಿಯನ್ನು ನಿಯಮಿತವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ವರದಿಯಾಗಿ ಸಲ್ಲಿಸಲಾಗುವುದು. ಈ ತಂಡವು ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಪ್ರಕರಣದ ವಿವರಗಳನ್ನು ಸಂಗ್ರಹಿಸಿ, ಸ್ಥಳ ಪರಿಶೀಲನೆ, ಸಾಕ್ಷಿಗಳ ವಿಚಾರಣೆ ಮತ್ತು ಅಸ್ಥಿಪಂಜರಗಳ ಡಿಎನ್‌ಎ ಪರೀಕ್ಷೆಯನ್ನು ನಡೆಸಲಿದೆ.

ಎಸ್‌ಐಟಿ ತಂಡವು ಈಗ ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶವಗಳ ದಫನ್ ಸ್ಥಳಗಳನ್ನು ಗುರುತಿಸಲು ಮತ್ತು ಅಸ್ಥಿಪಂಜರಗಳ ವೈದ್ಯಕೀಯ ಪರೀಕ್ಷೆಯನ್ನು ನಡೆಸಲು ಕಾರ್ಯಪ್ರವೃತ್ತವಾಗಿದೆ. ಪೊಲೀಸ್ ದಾಖಲೆಗಳ ಜೊತೆಗೆ, ಸಾಕ್ಷಿಗಳ ಹೇಳಿಕೆ ಮತ್ತು ಸ್ಥಳೀಯರ ಸಹಕಾರದೊಂದಿಗೆ ಈ ಪ್ರಕರಣವನ್ನು ಭೇದಿಸಲು ಕೆದಕಲು ತಂಡವು ಸಿದ್ಧತೆ ನಡೆಸಿದೆ. ಈ ತನಿಖೆಯ ಫಲಿತಾಂಶವು ಈ ಗಂಭೀರ ಆರೋಪಗಳ ಸತ್ಯಾಸತ್ಯತೆಯನ್ನು ಬೆಳಕಿಗೆ ತರಲಿದೆ ಎಂಬ ನಿರೀಕ್ಷೆಯಿದೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago