virendra hegde
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿರುವುದರಿಂದ ಸತ್ಯ ಹೊರಬರುತ್ತಿದೆ. ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಎಸ್ಐಟಿ ರಚನೆ ಮಾಡಿ ತನಿಖೆ ನಡೆಸುತ್ತಿರುವುದರಿಂದ ಸತ್ಯ ಹೊರಬರುತ್ತಿದೆ ಎಂದು ಹೇಳಿದರು.
ಇಷ್ಟು ಹಗೆತನ, ಅಪವಾದ ಯಾಕೆ ಬಂತು ಎಂದು ನಮಗೆ ಗೊತ್ತಿಲ್ಲ. ನಾವು ಸೇವೆ ಮಾಡುತ್ತೇವೆ. ಆದರೆ ಸೇವೆ ಪ್ರಚಾರದ ವಸ್ತುವಲ್ಲ. ಇಷ್ಟು ವರ್ಷಗಳ ಕಾಲ ನಾವು ಆರೋಗ್ಯವಾಗಿರಲು ನಮ್ಮ ನಿಸ್ವಾರ್ಥ ಸೇವೆಯೇ ಕಾರಣ. ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ನೀವೆಲ್ಲಾ ಗಮನಿಸಿದ್ದೀರಿ ಎಂದರು.
ಇದನ್ನು ಓದಿ : ಧರ್ಮಸ್ಥಳ ಕೇಸ್ಗೆ ಬಿಗ್ ಟ್ವಿಸ್ಟ್: ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆ?
ನಾನು ಹಲವಾರು ಪುಸ್ತಕಗಳನ್ನು ಓದುತ್ತಿದ್ದೇನೆ. ಸಿದ್ಧಗಂಗಾ ಶ್ರೀಗಳ ಹಲವು ಪುಸ್ತಕಗಳನ್ನು ಓದಿದ್ದೇನೆ. ಸಿದ್ಧಗಂಗಾ ಶ್ರೀಗಳು ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಎಂದು ಹೇಳಿದ್ದರು. ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ.
ಧರ್ಮಸ್ಥಳ ಬೇರೆ, ಧರ್ಮಸ್ಥಳ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಟುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ನೀವು ನೋಡಿದ್ದೀರಿ. ಯಾಕಿಷ್ಟು ದ್ವೇಷ ನನ್ನ ಮೇಲೆ ಇದೆ? ನನಗೆ ಗೊತ್ತಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ. ನಮ್ಮ ಮೇಲೆ ದೃಢನಂಬಿಕೆ ಇಟ್ಟ ಎಲ್ಲರಿಗೂ ಧನ್ಯವಾದ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸವಿದೆ. ಎಸ್ಐಟಿ ವರದಿ ಅರ್ಧ ಬಂದ ಕಾರಣ ಇಷ್ಟು ಮಾತನಾಡುತ್ತಿದ್ದೇನೆ. ಎಲ್ಲವನ್ನೂ ಮಂಜುನಾಥಸ್ವಾಮಿ, ಅಣ್ಣಪ್ಪಸ್ವಾಮಿ ನೋಡಿಕೊಳ್ಳುತ್ತಾರೆ. ನಾವು ಸತ್ಯದಿಂದ ಇದ್ದೇವೆ ಎಂದು ಹೇಳಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…