ರಾಜ್ಯ

ಧರ್ಮಸ್ಥಳ ಪ್ರಕರಣ| ಎಸ್‌ಐಟಿ ತನಿಖೆಯಿಂದ ಸತ್ಯ ಹೊರಬರುತ್ತಿದೆ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿರುವುದರಿಂದ ಸತ್ಯ ಹೊರಬರುತ್ತಿದೆ. ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸುತ್ತಿರುವುದರಿಂದ ಸತ್ಯ ಹೊರಬರುತ್ತಿದೆ ಎಂದು ಹೇಳಿದರು.

ಇಷ್ಟು ಹಗೆತನ, ಅಪವಾದ ಯಾಕೆ ಬಂತು ಎಂದು ನಮಗೆ ಗೊತ್ತಿಲ್ಲ. ನಾವು ಸೇವೆ ಮಾಡುತ್ತೇವೆ. ಆದರೆ ಸೇವೆ ಪ್ರಚಾರದ ವಸ್ತುವಲ್ಲ. ಇಷ್ಟು ವರ್ಷಗಳ ಕಾಲ ನಾವು ಆರೋಗ್ಯವಾಗಿರಲು ನಮ್ಮ ನಿಸ್ವಾರ್ಥ ಸೇವೆಯೇ ಕಾರಣ. ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ನೀವೆಲ್ಲಾ ಗಮನಿಸಿದ್ದೀರಿ ಎಂದರು.

ಇದನ್ನು ಓದಿ : ಧರ್ಮಸ್ಥಳ ಕೇಸ್‌ಗೆ ಬಿಗ್‌ ಟ್ವಿಸ್ಟ್:‌ ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆ?

ನಾನು ಹಲವಾರು ಪುಸ್ತಕಗಳನ್ನು ಓದುತ್ತಿದ್ದೇನೆ. ಸಿದ್ಧಗಂಗಾ ಶ್ರೀಗಳ ಹಲವು ಪುಸ್ತಕಗಳನ್ನು ಓದಿದ್ದೇನೆ. ಸಿದ್ಧಗಂಗಾ ಶ್ರೀಗಳು ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಎಂದು ಹೇಳಿದ್ದರು. ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ.

ಧರ್ಮಸ್ಥಳ ಬೇರೆ, ಧರ್ಮಸ್ಥಳ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಟುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ನೀವು ನೋಡಿದ್ದೀರಿ. ಯಾಕಿಷ್ಟು ದ್ವೇಷ ನನ್ನ ಮೇಲೆ ಇದೆ? ನನಗೆ ಗೊತ್ತಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ. ನಮ್ಮ ಮೇಲೆ ದೃಢನಂಬಿಕೆ ಇಟ್ಟ ಎಲ್ಲರಿಗೂ ಧನ್ಯವಾದ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸವಿದೆ. ಎಸ್‌ಐಟಿ ವರದಿ ಅರ್ಧ ಬಂದ ಕಾರಣ ಇಷ್ಟು ಮಾತನಾಡುತ್ತಿದ್ದೇನೆ. ಎಲ್ಲವನ್ನೂ ಮಂಜುನಾಥಸ್ವಾಮಿ, ಅಣ್ಣಪ್ಪಸ್ವಾಮಿ ನೋಡಿಕೊಳ್ಳುತ್ತಾರೆ. ನಾವು ಸತ್ಯದಿಂದ ಇದ್ದೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

21 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

29 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago