ರಾಜ್ಯ

ಧರ್ಮಸ್ಥಳ ಪ್ರಕರಣ : ಬಿಜೆಪಿ ಹೇಳಿದ್ದನ್ನೆ ಅನುಸರಿಸುತ್ತೇವೆ ; ಡಿಕೆಶಿ ಹೀಗಂದಿದ್ಯಾಕೆ ?

ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ನಡೆದಿರುವ ಅನುಮಾನಸ್ಪದ ನಾಪತ್ತೆ ಪ್ರಕರಣಗಳು, ಅಸಹಜ ಸಾವಿನ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ದಳ ರಚಿಸಲಾಗಿದೆ. ಗೃಹಸಚಿವರು ಇದನ್ನು ನಿರ್ವಹಣೆ ಮಾಡುತ್ತಾರೆ. ಒಳ್ಳೆಯ ಅಧಿಕಾರಿಗಳ ತಂಡವನ್ನೇ ನಿಯೋಜಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿಚಾರವಾಗಿ ಯಾವ ರೀತಿ ನಡೆದುಕೊಳ್ಳಬೇಕು ಎಂಬುದನ್ನು ಬಿಜೆಪಿಯವರೇ ಹೇಳಲಿ. ನಾವು ಅದರಂತೆ ಅದನ್ನು ಅನುಸರಿಸುತ್ತೇವೆ. ಬಿಜೆಪಿಯವರು ಮತ್ತು ಮಾಧ್ಯಮಗಳ ಭಾಷೆಯೇ ನನಗರ್ಥವಾಗುತ್ತಿಲ್ಲ. 15 ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗಳ ಬಗ್ಗೆ ವ್ಯಕ್ತಿಯೊಬ್ಬ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದಾನೆ. ಮಾಧ್ಯಮಗಳು ಧರ್ಮಸ್ಥಳ ಭಾಗಕ್ಕೆ ಸಂಬಂಧಪಟ್ಟಂತಹ ವಿಚಾರಗಳನ್ನು ದೊಡ್ಡದಾಗಿ ಪ್ರಚಾರ ಮಾಡಿದೆ. ಸರ್ಕಾರ ಎಲ್ಲರ ಧ್ವನಿಗೂ ಕಿವಿಯಾಗಬೇಕು. ವಿರೋಧಪಕ್ಷಗಳ ಅಭಿಪ್ರಾಯಗಳನ್ನೂ ಗೌರವಿಸಬೇಕು. ಹಾಗಾಗಿ ತನಿಖಾ ತಂಡ ರಚಿಸಿದೆ. ಈ ವಿಚಾರವಾಗಿ ಆತುರ ಬೇಡ. ತನಿಖೆಯ ನಂತರ ಬರುವ ಅಂಶಗಳನ್ನು ಪರಿಗಣಿಸುವುದು ಸೂಕ್ತ ಎಂದು ಹೇಳಿದರು.

ಬಿಬಿಎಂಪಿ ವಿಭಜನೆ ಶತಸಿದ್ಧ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಭಜಿಸಲು ನಾವು ಬದ್ಧರಾಗಿದ್ದು, ಈ ವಿಚಾರವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅದಕ್ಕೂ ಮುನ್ನ ವಿರೋಧಪಕ್ಷಗಳ ನಾಯಕರ ಜೊತೆ ಅಧಿಕೃತವಾಗಿ ಮತ್ತು ಅನಧಿಕೃತವಾಗಿ ಚರ್ಚೆ ಮಾಡುತ್ತೇವೆ. ಜನಸಾಮಾನ್ಯರ ಅಭಿಪ್ರಾಯಗಳನ್ನೂ ಪರಿಗಣಿಸಿ ಬೆಂಗಳೂರಿನ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಮಾಡುತ್ತೇವೆ ಎಂದರು.

ಇ ಖಾತಾ, ಎ ಖಾತಾ, ಬಿ ಖಾತಾ ಆಂದೋಲನಗಳು ಮುಗಿದ ಬಳಿಕ ಸಂಬಂಧಪಟ್ಟಂತೆ ಚರ್ಚೆಯನ್ನು ಮುಂದುವರೆಸುತ್ತೇವೆ, ಸಭೆ ಕರೆಯುತ್ತೇವೆ ಎಂದ ಅವರು, 5 ಪಾಲಿಕೆಗಳನ್ನಾಗಿ ವಿಭಜಿಸುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಸ್ವಾಗತಾರ್ಹ. ಇದು ಯಾವುದೇ ತಪ್ಪುಗಳನ್ನು ಮಾಡದಂತೆ ನಮಗೆ ಎಚ್ಚರಿಕೆಯ ಗಂಟೆ. ನ್ಯಾಯಾಲಯದಲ್ಲಿ ಪ್ರಶ್ನಿಸುವ ಜನಸಮಾನ್ಯರ ಅಧಿಕಾರವನ್ನು ನಾವು ಮೊಟಕುಗೊಳಿಸುವುದಿಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

3 mins ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

13 mins ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

24 mins ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

1 hour ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

1 hour ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

2 hours ago