ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ ಹೋರಾಟಗಾರ್ತಿಯರು ಪತ್ರ ಬರೆದಿದ್ದು, ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.
ʻಕೊಂದವರು ಯಾರು? Who Killed the Women in Dharmasthala?ʼ ಶೀರ್ಷಿಕೆಯಲ್ಲಿ ಪತ್ರ ಬರೆಯಲಾಗಿದ್ದು, ಎಸ್ಐಟಿ ತನಿಖೆಯ ಬೆಳವಣಿಗೆ ಬಗ್ಗೆ ತೀವ್ರ ಆತಂಕ ಹೊರಹಾಕಿವೆ ಮಹಿಳಾ ಸಂಘಟನೆಗಳು. ಅಲ್ಲದೇ ಚಿನ್ನಯ್ಯನ ಬಂಧನ, ಸುಜಾತ ಭಟ್ ಪ್ರಕರಣ, ತನಿಖೆ ಕುರಿತ ಮಾಧ್ಯಮ ವರದಿಗಳು ಹಾಗೂ ಡಿಸಿಎಂ ಡಿಕೆಶಿ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.
ಈ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ, ಪ್ರಕರಣದಲ್ಲಿ ಉರುಳಿಲ್ಲ ಎನ್ನುವಂತೆ ದಾರಿ ತಪ್ಪಿಸುವಂತಹ ಹೇಳಿಕೆಯನ್ನ ಡಿಸಿಎಂ ನೀಡಿದ್ದಾರೆ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿಪಕ್ಷಗಳ ಒತ್ತಡಕ್ಕೆ ಮಣಿದಿದ್ದಾರೆ ಎಂದಿರುವ ಹೋರಾಟಗಾರರು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಮೂರು ಬೇಡಿಕೆಗಳನ್ನಿಟ್ಟಿದ್ದಾರೆ.
SIT ಯವರು 2018ರ ವಿ.ಎಸ್ ಉಗ್ರಪ್ಪ ಸಮಿತಿ ನೀಡಿದ ವರದಿ ಪರಿಗಣಿಸಬೇಕು. SIT ನ್ಯಾಯ ಸಮ್ಮತ ತನಿಖೆ ನಡೆಸಲು ಸರ್ಕಾರದ ಜನಪ್ರತಿನಿಧಿಗಳು ಸಹಕರಿಸಬೇಕು. ಸೌಜನ್ಯ ಪ್ರಕರಣದ ತನಿಖೆಯಲ್ಲಿ ಲೋಪ ಎಸಗಿದ ಅಧಿಕಾರಿಗಳನ್ನ ನ್ಯಾಯಲಯದ ಆದೇಶದಂತೆ ತನಿಖೆಗೆ ಒಳಪಡಿಸಬೇಕು ಎಂಬ ಮೂರು ಬೇಡಿಕೆಗಳನ್ನು ಮುಂದಿಟ್ಟಿವೆ.
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…