ರಾಜ್ಯ

ಧರ್ಮಸ್ಥಳ ಪ್ರಕರಣ : ಯುಟ್ಯೂಬರ್‌ ಸಮೀರ್‌ಗೆ ಎಸ್‌ಐಟಿಯಿಂದ ಪ್ರಶ್ನೆಗಳ ಬಾಣ

ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವ ಹೂತ್ತಿದ್ದೇನೆ ಅಂತ ಹೇಳಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿದೆ. ಇದರ ನಡುವೆ ಯುಟ್ಯೂಬರ್ ಸಮೀರ್ ವಿರುದ್ಧವೂ ಬೆಳ್ತಂಗಡಿ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದರು.

ದೊಂಬಿ ಮಾಡುವ ಉದ್ದೇಶದಿಂದ ವಿಡಿಯೋ ಮಾಡಿದ ಆರೋಪದಲ್ಲಿ ಸುಮೋಟೋ ಕೇಸ್‌ ದಾಖಲಿಸಿಕೊಂಡಿದ್ದ ಪೊಲೀಸರು, ಶುಕ್ರವಾರ ಸಮೀರ್‌ ಬಂಧನಕ್ಕೆ ಮುಂದಾಗಿದ್ದರು. ಆದರೆ, ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್‌ ಅಜ್ಞಾತವಾಗಿದ್ದರು.

ಹೀಗಾಗಿ, ಪೊಲೀಸರು ಶನಿವಾರ ಆತನ ಬೆಂಗಳೂರು ಹಾಗೂ ಬಳ್ಳಾರಿ ನಿವಾಸಕ್ಕೆ ತೆರಳಿ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿ ಬಂದಿದ್ದರು. ಹೀಗಾಗಿ, ಭಾನುವಾರ ಸಮೀರ್‌ ಪೊಲೀಸರ ವಿಚಾರಣೆಗೆ ಹಾಜರಾಗಿದ್ದನು. ಮೂವರು ವಕೀಲರ ಸಮೇತ, ದಾಖಲೆ ಹಿಡಿದು ವಿಚಾರಣೆಗೆ ಬಂದಿದ್ದನು.

ಸಮೀರ್​ಗೆ 45 ಪ್ರಶ್ನೆ
ತನಿಖಾಧಿಕಾರಿ ನಾಗೇಶ್‌ ಕದ್ರಿ ಅವರು ಸಮೀರ್ ಎಂಡಿಯನ್ನ ವಿಚಾರಣೆಗೆ ಒಳಪಡಿಸಿದರು. ಧರ್ಮಸ್ಥಳ ಬಗ್ಗೆ ಮಾಡಿದ್ದ ವಿಡಿಯೋ ಮೇಕಿಂಗ್​ಗೆ ಸಹಕಾರ ಕೊಟ್ಟಿದ್ಯಾರು? ಆರೋಪಕ್ಕೆ ಸಾಕ್ಷಿ ಇದೆಯಾ ಸೇರಿದಂತೆ ಚಿನ್ನಯ್ಯನ ಲಿಂಕ್ ಬಗ್ಗೆಯೂ ಸೇರಿದಂತೆ ಸುಮಾರು 45 ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

1 hour ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

10 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

12 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

13 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

15 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

18 hours ago