R Ashok
ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು ಸರದಿ. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಹಾಗೂ ಲಾಠಿ ಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ. ಸರ್ಕಾರದ ಕುಮ್ಮಕ್ಕಿಲ್ಲದೇ ಈ ಘಟನೆಗಳು ನಡೆಯುತ್ತಿರಲಿಲ್ಲ. ನಾವು ಪಾಕಿಸ್ತಾನದಲ್ಲಿದ್ದಿವೋ, ಕರ್ನಾಟಕದಲ್ಲಿದ್ದೀವೋ ಎಂಬ ಭ್ರಮೆ ಮೂಡುತ್ತಿದೆ ಎಂದು ಕಿಡಿಕಾರಿದರು.
ಇನ್ನು ತಿಮರೋಡಿ ಗ್ಯಾಂಗ್ ಸಿದ್ದರಾಮಯ್ಯನ ಸುತ್ತ ಸುತ್ತಿಕೊಂಡಿದ್ದಾರೆ. ಗಣಪತಿ ವಿಸರ್ಜನೆ ಮಾಡುವುದು ಸಾರ್ವಜನಿಕ ರಸ್ತೆ. ಇವರ ಅಪ್ಪನ ಆಸ್ತಿನಾ? ನಾವು ಟ್ಯಾಕ್ಸ್ ಕೊಟ್ಟಿರುವುದು. ಇವರ ಯೋಗ್ಯತೆಗೆ ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್ ಅವಶ್ಯಕತೆ ಇತ್ತಾ? ಹಿಂದೂಗಳ ಮೇಲೆ ಲಾಠಿ ಚಾರ್ಜ್, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ? ಕಲ್ಲು ಎಸೆದವರಿಗೆ ಯಾಕೆ ಬಡಿದಿಲ್ಲ? ಈ ತರಹ ಗೂಂಡಾಗಳು ಮಸೀದಿಯಲ್ಲಿ ಇರುತ್ತಾರೆ ಎಂದು ನಿಮಗೆ ಜ್ಞಾನ ಬೇಡವೇ. ಮದ್ದೂರು ಘಟನೆಗೆ ಸಿಎಂ ಹಾಗೂ ಡಿಸಿಎಂ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…