R Ashok
ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು ಸರದಿ. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಹಾಗೂ ಲಾಠಿ ಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ. ಸರ್ಕಾರದ ಕುಮ್ಮಕ್ಕಿಲ್ಲದೇ ಈ ಘಟನೆಗಳು ನಡೆಯುತ್ತಿರಲಿಲ್ಲ. ನಾವು ಪಾಕಿಸ್ತಾನದಲ್ಲಿದ್ದಿವೋ, ಕರ್ನಾಟಕದಲ್ಲಿದ್ದೀವೋ ಎಂಬ ಭ್ರಮೆ ಮೂಡುತ್ತಿದೆ ಎಂದು ಕಿಡಿಕಾರಿದರು.
ಇನ್ನು ತಿಮರೋಡಿ ಗ್ಯಾಂಗ್ ಸಿದ್ದರಾಮಯ್ಯನ ಸುತ್ತ ಸುತ್ತಿಕೊಂಡಿದ್ದಾರೆ. ಗಣಪತಿ ವಿಸರ್ಜನೆ ಮಾಡುವುದು ಸಾರ್ವಜನಿಕ ರಸ್ತೆ. ಇವರ ಅಪ್ಪನ ಆಸ್ತಿನಾ? ನಾವು ಟ್ಯಾಕ್ಸ್ ಕೊಟ್ಟಿರುವುದು. ಇವರ ಯೋಗ್ಯತೆಗೆ ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್ ಅವಶ್ಯಕತೆ ಇತ್ತಾ? ಹಿಂದೂಗಳ ಮೇಲೆ ಲಾಠಿ ಚಾರ್ಜ್, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ? ಕಲ್ಲು ಎಸೆದವರಿಗೆ ಯಾಕೆ ಬಡಿದಿಲ್ಲ? ಈ ತರಹ ಗೂಂಡಾಗಳು ಮಸೀದಿಯಲ್ಲಿ ಇರುತ್ತಾರೆ ಎಂದು ನಿಮಗೆ ಜ್ಞಾನ ಬೇಡವೇ. ಮದ್ದೂರು ಘಟನೆಗೆ ಸಿಎಂ ಹಾಗೂ ಡಿಸಿಎಂ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…