ರಾಜ್ಯ

ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು ಸರದಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿ

ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು ಸರದಿ. ಈ ಘಟನೆಗೆ ಕಾಂಗ್ರೆಸ್‌ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಹಾಗೂ ಲಾಠಿ ಚಾರ್ಜ್‌ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್‌ ಅವರು ಅಲ್ಲ. ಸರ್ಕಾರದ ಕುಮ್ಮಕ್ಕಿಲ್ಲದೇ ಈ ಘಟನೆಗಳು ನಡೆಯುತ್ತಿರಲಿಲ್ಲ. ನಾವು ಪಾಕಿಸ್ತಾನದಲ್ಲಿದ್ದಿವೋ, ಕರ್ನಾಟಕದಲ್ಲಿದ್ದೀವೋ ಎಂಬ ಭ್ರಮೆ ಮೂಡುತ್ತಿದೆ ಎಂದು ಕಿಡಿಕಾರಿದರು.

ಇನ್ನು ತಿಮರೋಡಿ ಗ್ಯಾಂಗ್‌ ಸಿದ್ದರಾಮಯ್ಯನ ಸುತ್ತ ಸುತ್ತಿಕೊಂಡಿದ್ದಾರೆ. ಗಣಪತಿ ವಿಸರ್ಜನೆ ಮಾಡುವುದು ಸಾರ್ವಜನಿಕ ರಸ್ತೆ. ಇವರ ಅಪ್ಪನ ಆಸ್ತಿನಾ? ನಾವು ಟ್ಯಾಕ್ಸ್‌ ಕೊಟ್ಟಿರುವುದು. ಇವರ ಯೋಗ್ಯತೆಗೆ ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್‌ ಅವಶ್ಯಕತೆ ಇತ್ತಾ? ಹಿಂದೂಗಳ ಮೇಲೆ ಲಾಠಿ ಚಾರ್ಜ್‌, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ? ಕಲ್ಲು ಎಸೆದವರಿಗೆ ಯಾಕೆ ಬಡಿದಿಲ್ಲ? ಈ ತರಹ ಗೂಂಡಾಗಳು ಮಸೀದಿಯಲ್ಲಿ ಇರುತ್ತಾರೆ ಎಂದು ನಿಮಗೆ ಜ್ಞಾನ ಬೇಡವೇ. ಮದ್ದೂರು ಘಟನೆಗೆ ಸಿಎಂ ಹಾಗೂ ಡಿಸಿಎಂ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago