ರಾಜ್ಯ

ಧರ್ಮಸ್ಥಳ ರಹಸ್ಯ | ದೂರುದಾರ ಮಾಸ್ಕ್‌ಮ್ಯಾನ್‌ ಬಂಧನಕ್ಕೆ ಕಾರಣವೇನು?

ಬೆಂಗಳೂರು : ಧರ್ಮಸ್ಥಳದಲ್ಲಿ 17 ಸ್ಥಳಗಳಲ್ಲಿ ಉತ್ಖನನ ನಡೆಸಿ ಜಿಪಿಆರ್‌ ಯಂತ್ರದಿಂದ ಶೋಧ ಕಾರ್ಯದ ಬಳಿಕವೂ ಯಾವ ಪ್ರಮುಖ ಅಂಶಗಳೂ ಪತ್ತೆಯಾಗದ ಹಿನ್ನಲೆಯಲ್ಲಿ, ಕಳೆದ ಭಾನುವಾರವೇ ದೂರುದಾರನನ್ನು ಆರೋಪಿ ಎಂದು ಪರಿಗಣಿಸಿ ಬಂಧಿಸಲು ಎಸ್‌‍ಐಟಿ ಸಿದ್ಧತೆ ಮಾಡಿಕೊಂಡಿತ್ತು. ಆದರೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದ ಕಾರಣಕ್ಕೆ ವಿಳಂಬ ಮಾಡಿದ್ದಾಗಿ ತಿಳಿದು ಬಂದಿದೆ.

ದೂರುದಾರನಾಗಿರುವ ಮಾಸ್ಕ್‌ಮ್ಯಾನ್‌ ಸಿ.ಎನ್‌. ಚಿನ್ನಯ್ಯ ಕಳೆದ ಶನಿವಾರವೇ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಹೀಗಾಗಿ ಆತನನ್ನು ಮಾರನೇ ದಿನವೇ ಬಂಧಿಸಲು ಎಸ್‌‍ಐಟಿ ಅಧಿಕಾರಿಗಳು ತಯಾರಾಗಿದ್ದರು. ಆದರೆ ಇನ್ನಷ್ಟು ಸ್ಪಷ್ಟನೆ ಅಗತ್ಯ ಇದ್ದುದ್ದರಿಂದಾಗಿ ವಿಚಾರಣೆ ಮುಂದುವರೆಸಲಾಯಿತು. ಒಂದು ವೇಳೆ ಅಂದೇ ಬಂಧಿಸಿದ್ದರೇ ವಿಧಾನಮಂಡಲ ಅಧಿವೇಶನದಲ್ಲಿ ಮತ್ತಷ್ಟು ಗದ್ದಲವಾಗಿ ಸರ್ಕಾರಕ್ಕೆ ಮುಜುಗರವಾಗುವ ಸಾಧ್ಯತೆ ಇದ್ದಿದ್ದರಿಂದ ತಡ ಮಾಡಿದ್ದಾಗಿ ತಿಳಿದು ಬಂದಿದೆ.

ಸಿ.ಎನ್‌. ಚೆನ್ನಯ್ಯನನ್ನು ಎಸ್‌‍ಐಟಿಯ ಮುಖ್ಯಸ್ಥ ಪ್ರಣಬ್‌ ಮೊಹಾಂತಿ, ನಿನ್ನೆ 18 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಈ ವೇಳೆ ಆತ ತಾನು ತಲೆಬುರುಡೆಯನ್ನು ಎಲ್ಲಿಂದ ತಂದಿದ್ದೇನೆ ಎಂಬ ವಿಚಾರವನ್ನು ಸ್ಪಷ್ಟವಾಗಿ ತಿಳಿಸದೆ ಗೊಂದಲದ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಈ ಹಿಂದೆ ನಾನು ತಮಿಳುನಾಡಿನ ಈರೋಡ್‌ನಲ್ಲಿದ್ದೆ. ಉಜಿರೆಯ ಪಂಚಾಯತ್‌ನಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದೆ. ಆ ಬಳಿಕ ಧರ್ಮಸ್ಥಳದಲ್ಲಿ ನೈರ್ಮಲೀಕರಣ ಕೆಲಸ ಮಾಡುತ್ತಿದ್ದೆ. ಅಲ್ಲಿ ಕೆಲಸ ಬಿಟ್ಟ ಬಳಿಕ 2014 ರಿಂದಲೂ ಮತ್ತೇ ತಮಿಳುನಾಡಿನಲ್ಲಿ ನೆಲೆಸಿದ್ದೆ ಎಂದು ತಿಳಿಸಿರುವುದಾಗಿ ತಿಳಿದು ಬಂದಿದೆ.

2023ಲ್ಲಿ ಕೆಲವರು ನನ್ನನ್ನು ಸಂಪರ್ಕಿಸಿ ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿರುವ ಬಗ್ಗೆ ಮಾಹಿತಿ ಕೇಳಿದರು. ಎಲ್ಲಾ ಶವಗಳನ್ನು ಕಾನೂನು ಬದ್ಧವಾಗಿಯೇ ಸಂಸ್ಕಾರ ಮಾಡಿದ್ದೇನೆ ಎಂದು ನಾನು ತಿಳಿಸಿದ್ದೆ. 2024ರ ವೇಳೆಗೆ ನನ್ನನ್ನು ಕರ್ನಾಟಕಕ್ಕೆ ಕರೆ ತಂದ ಗುಂಪು ನೂರಾರು ಶವಗಳನ್ನು ಹೂತುಹಾಕಿರುವುದಾಗಿ ಹೇಳಿ ಪೊಲೀಸರಿಗೆ ಶರಣಾಗುವಂತೆ ಸೂಚಿಸಿತ್ತು. ಅವರು ಕೊಟ್ಟ ತಲೆಬುರುಡೆಯನ್ನು ತಂದು ಪೊಲೀಸರಿಗೆ ನೀಡಿದ್ದಾಗಿ ಹೇಳಿದ್ದಾನೆ.
ಆರಂಭದಲ್ಲಿ ನನಗೆ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಅಳುಕಿತ್ತು. ಸುಜಾತಭಟ್‌ ತಮ ಮಗಳು ಕಾಣೆಯಾಗಿರುವ ಬಗ್ಗೆ ದೂರು ನೀಡಿದ ಬಳಿಕ ನನಗೆ ಧೈರ್ಯ ಬಂತು. ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದೆ ಎಂದು ಸ್ಪಷ್ಟಪಡಿಸಿದ್ದಾನೆ ಎನ್ನಲಾಗಿದೆ.

ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಯಾವ ರೀತಿ ಹೇಳಿಕೆ ನೀಡಬೇಕು ಎಂದು ಮೂವರು ವ್ಯಕ್ತಿಗಳು ನನಗೆ ಹಲವಾರು ಬಾರಿ ತರಬೇತಿ ನೀಡಿದ್ದರು ಎಂದು ಚಿನ್ನಯ್ಯ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ನಾನು ಪಾತ್ರದಾರ ಮಾತ್ರ. ಸೂತ್ರದಾರರು ಬೇರೆ ಇದ್ದಾರೆ. ಅವರು ಹೇಳಿಕೊಟ್ಟಂತೆ ನಾನು ಮಾಡಿದ್ದೇನೆ ಎಂದು ಆರೋಪಿ ವಿಚಾರಣೆ ಸಂದರ್ಭದಲ್ಲಿ ಹೇಳಿರುವುದಾಗಿ ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ಕಾಡಾನೆ ದಾಳಿ: ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಳ್ಳಿಕಾರ್‌ ಹೋರಿ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ…

18 mins ago

ಬನ್ನೇರುಘಟ್ಟ ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ 4 ಚೀತಾ

ಆನೇಕಲ್:‌ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…

28 mins ago

ಬೇಸಿಗೆ ಆರಂಭದಲ್ಲೇ 99 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್‌ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ…

1 hour ago

ಸರಗೂರು| ಹೆಣ್ಣು ಹುಲಿ ಸೆರೆ: ನಿರಾಳರಾದ ಗ್ರಾಮಸ್ಥರು

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…

2 hours ago

ಮಕ್ಳಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…

2 hours ago

ಭಾರತದ ಗಾಂಧಿ ಮತ್ತು ಆಫ್ರಿಕಾದ ಗಾಂಧಿ

ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…

3 hours ago