ರಾಜ್ಯ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ : ಎಸ್‌ಐಟಿ ಮುಂದೆ ದೂರುದಾರ ಹಾಜರು

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ದೂರು ನೀಡಿರುವ ಅನಾಮೇಧಯ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಥಳ ಮಹಜರಿಗೆ ಸಿದ್ಧತೆ ಮಾಡಿಕೊಂಡಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ಅದರಲ್ಲೂ ಹೆಣ್ಣು ಮಕ್ಕಳ, ಮಹಿಳೆಯರನ್ನು ಅತ್ಯಾಚಾರ, ಕೊಲೆ ಮಾಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ದೂರು ನೀಡಿದ್ದು, ತಾವೇ ಹಲವಾರು ಮೃತದೇಹಗಳನ್ನು ಹೂತಿದ್ದು ಅವುಗಳನ್ನು ಹೊರತೆಗೆಯುತ್ತೇನೆಂದು ಹೇಳಿದ್ದಾರೆ.

ಎಸ್‍ಐಟಿ ಮುಖ್ಯಸ್ಥ ಅನುಚೇತ್ ಹಾಗು ಎಸ್ಪಿ ಜಿತೇಂದ್ರ ಕುಮಾರ್ ದಯಮಾ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. ವಕೀಲರ ಜೊತೆ ದೂರು ಕೊಟ್ಟ ಅನಾಮಿಕ ವಿಚಾರಣೆಗೆ ಹಾಜರಾಗಿದ್ದಾನೆ ಎನ್ನಲಾಗ್ತಿದೆ. ಅಧಿಕಾರಿಗಳು ಸಾಕ್ಷ್ಯ ದೂರು ದಾರನಿಗೆ ಬುರುಡೆ ಅಗೆದ ಜಾಗವನ್ನ ತೋರಿಸುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸದ್ಯ ಅನಾಮಿಕ ಕೊಟ್ಟ ಬುರುಡೆ ಎಫ್ ಎಸ್ ಎಲ್ ಲ್ಯಾಬ್ ನಲ್ಲಿದೆ. ಆದರೆ ಈ ಬುರುಡೆ ಧರ್ಮಸ್ಥಳ ಗ್ರಾಮದಿಂದಲೇ ತೆಗೆದಿದ್ದ ಎಂಬ ಬಗ್ಗೆ ತನಿಖೆಗೆ ಎಸ್‍ಐಟಿ ಮುಂದಾಗಿದೆ. ಅನಾಮಿಕ ದೂರುದಾರನ ಮೂಲಕವೇ ಬುರುಡೆ ಅಗೆದ ಜಾಗದ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಲಿದ್ದಾರೆ.

ಜಾಗದ ಪರಿಶೀಲನೆ ಬಳಿಕ ಆ ಜಾಗದ ಮಣ್ಣಿನ ಎಫ್‍ಎಸ್‍ಎಲ್ ಪರೀಕ್ಷೆ ಕೂಡ ನಡೆಯಲಿದೆ. ಅನಾಮಿಕ ಕೊಟ್ಟ ಬುರುಡೆಯಲ್ಲಿರೋ ಮಣ್ಣಿನ ಕಣ ಮತ್ತು ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ತೋರಿಸುವ ಜಾಗದ ಮಣ್ಣಿನ ಪರೀಕ್ಷೆ ನಡೆಯಲಿದ್ದು, ಎರಡೂ ಮಣ್ಣಿನ ಕಣಗಳನ್ನು ಮ್ಯಾಚ್ ಮಾಡಿ ನೋಡಿ ಬಳಿಕ ಬುರುಡೆ ಧರ್ಮಸ್ಥಳ ಗ್ರಾಮದಲ್ಲೇ ತೆಗೆದಿದ್ದ ಅನ್ನೋದನ್ನ ಖಚಿತ ಪಡಿಸಿಕೊಳ್ಳಲು ಎಸ್‍ಐಟಿ ಮುಂದಾಗಿದೆ. ಎಸ್ ಐ ಟಿ ಅಧಿಕಾರಿಗಳು ಅನಾಮಿಕನನ್ನು ವಿಚಾರಣೆಗೆ ಒಳಪಡಿಸಿದ್ದು, ನಾನಾ ಪ್ರಶ್ನೆಗಳಿಗೆ ಉತ್ತರ ಪಡೆಯುತ್ತಿದ್ದಾರೆ. ಅನಾಮಿಕ ಹೇಳಿಕೆಯನ್ನ ಇನ್ ಕ್ಯಾಮೆರಾದಲ್ಲಿ ದಾಖಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ರಷ್ಯಾ-ಭಾರತ ಇನ್ನೂ ಹತ್ತಿರ

ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…

11 mins ago

ಓದುಗರ ಪತ್ರ: ಸೋಲಾರ್ ಕೃಷಿ ಪಂಪ್ ಸೆಟ್ ಸಬ್ಸಿಡಿ ಸದ್ಬಳಕೆಯಾಗಲಿ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…

21 mins ago

ಕಾಡುಪ್ರಾಣಿಗಳಿಗೆ ಪ್ರತಿನಿತ್ಯ ಒಂದು ಹಸು ಬಲಿ!

ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…

47 mins ago

ಇದ್ದೂ ಇಲ್ಲದಂತಿರುವ ಟರ್ಷಿಯರಿ ಕ್ಯಾನ್ಸರ್‌ ಕೇರ್‌

ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…

1 hour ago

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

4 hours ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

4 hours ago