ರಾಜ್ಯ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ : ಎಸ್‌ಐಟಿ ಮುಂದೆ ದೂರುದಾರ ಹಾಜರು

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ದೂರು ನೀಡಿರುವ ಅನಾಮೇಧಯ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಥಳ ಮಹಜರಿಗೆ ಸಿದ್ಧತೆ ಮಾಡಿಕೊಂಡಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ಅದರಲ್ಲೂ ಹೆಣ್ಣು ಮಕ್ಕಳ, ಮಹಿಳೆಯರನ್ನು ಅತ್ಯಾಚಾರ, ಕೊಲೆ ಮಾಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ದೂರು ನೀಡಿದ್ದು, ತಾವೇ ಹಲವಾರು ಮೃತದೇಹಗಳನ್ನು ಹೂತಿದ್ದು ಅವುಗಳನ್ನು ಹೊರತೆಗೆಯುತ್ತೇನೆಂದು ಹೇಳಿದ್ದಾರೆ.

ಎಸ್‍ಐಟಿ ಮುಖ್ಯಸ್ಥ ಅನುಚೇತ್ ಹಾಗು ಎಸ್ಪಿ ಜಿತೇಂದ್ರ ಕುಮಾರ್ ದಯಮಾ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. ವಕೀಲರ ಜೊತೆ ದೂರು ಕೊಟ್ಟ ಅನಾಮಿಕ ವಿಚಾರಣೆಗೆ ಹಾಜರಾಗಿದ್ದಾನೆ ಎನ್ನಲಾಗ್ತಿದೆ. ಅಧಿಕಾರಿಗಳು ಸಾಕ್ಷ್ಯ ದೂರು ದಾರನಿಗೆ ಬುರುಡೆ ಅಗೆದ ಜಾಗವನ್ನ ತೋರಿಸುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸದ್ಯ ಅನಾಮಿಕ ಕೊಟ್ಟ ಬುರುಡೆ ಎಫ್ ಎಸ್ ಎಲ್ ಲ್ಯಾಬ್ ನಲ್ಲಿದೆ. ಆದರೆ ಈ ಬುರುಡೆ ಧರ್ಮಸ್ಥಳ ಗ್ರಾಮದಿಂದಲೇ ತೆಗೆದಿದ್ದ ಎಂಬ ಬಗ್ಗೆ ತನಿಖೆಗೆ ಎಸ್‍ಐಟಿ ಮುಂದಾಗಿದೆ. ಅನಾಮಿಕ ದೂರುದಾರನ ಮೂಲಕವೇ ಬುರುಡೆ ಅಗೆದ ಜಾಗದ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಲಿದ್ದಾರೆ.

ಜಾಗದ ಪರಿಶೀಲನೆ ಬಳಿಕ ಆ ಜಾಗದ ಮಣ್ಣಿನ ಎಫ್‍ಎಸ್‍ಎಲ್ ಪರೀಕ್ಷೆ ಕೂಡ ನಡೆಯಲಿದೆ. ಅನಾಮಿಕ ಕೊಟ್ಟ ಬುರುಡೆಯಲ್ಲಿರೋ ಮಣ್ಣಿನ ಕಣ ಮತ್ತು ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ತೋರಿಸುವ ಜಾಗದ ಮಣ್ಣಿನ ಪರೀಕ್ಷೆ ನಡೆಯಲಿದ್ದು, ಎರಡೂ ಮಣ್ಣಿನ ಕಣಗಳನ್ನು ಮ್ಯಾಚ್ ಮಾಡಿ ನೋಡಿ ಬಳಿಕ ಬುರುಡೆ ಧರ್ಮಸ್ಥಳ ಗ್ರಾಮದಲ್ಲೇ ತೆಗೆದಿದ್ದ ಅನ್ನೋದನ್ನ ಖಚಿತ ಪಡಿಸಿಕೊಳ್ಳಲು ಎಸ್‍ಐಟಿ ಮುಂದಾಗಿದೆ. ಎಸ್ ಐ ಟಿ ಅಧಿಕಾರಿಗಳು ಅನಾಮಿಕನನ್ನು ವಿಚಾರಣೆಗೆ ಒಳಪಡಿಸಿದ್ದು, ನಾನಾ ಪ್ರಶ್ನೆಗಳಿಗೆ ಉತ್ತರ ಪಡೆಯುತ್ತಿದ್ದಾರೆ. ಅನಾಮಿಕ ಹೇಳಿಕೆಯನ್ನ ಇನ್ ಕ್ಯಾಮೆರಾದಲ್ಲಿ ದಾಖಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

10 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

28 mins ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

53 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

2 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

2 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago