ರಾಜ್ಯ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ : ಎಸ್‌ಐಟಿ ಮುಂದೆ ದೂರುದಾರ ಹಾಜರು

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ದೂರು ನೀಡಿರುವ ಅನಾಮೇಧಯ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಥಳ ಮಹಜರಿಗೆ ಸಿದ್ಧತೆ ಮಾಡಿಕೊಂಡಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ಅದರಲ್ಲೂ ಹೆಣ್ಣು ಮಕ್ಕಳ, ಮಹಿಳೆಯರನ್ನು ಅತ್ಯಾಚಾರ, ಕೊಲೆ ಮಾಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ದೂರು ನೀಡಿದ್ದು, ತಾವೇ ಹಲವಾರು ಮೃತದೇಹಗಳನ್ನು ಹೂತಿದ್ದು ಅವುಗಳನ್ನು ಹೊರತೆಗೆಯುತ್ತೇನೆಂದು ಹೇಳಿದ್ದಾರೆ.

ಎಸ್‍ಐಟಿ ಮುಖ್ಯಸ್ಥ ಅನುಚೇತ್ ಹಾಗು ಎಸ್ಪಿ ಜಿತೇಂದ್ರ ಕುಮಾರ್ ದಯಮಾ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. ವಕೀಲರ ಜೊತೆ ದೂರು ಕೊಟ್ಟ ಅನಾಮಿಕ ವಿಚಾರಣೆಗೆ ಹಾಜರಾಗಿದ್ದಾನೆ ಎನ್ನಲಾಗ್ತಿದೆ. ಅಧಿಕಾರಿಗಳು ಸಾಕ್ಷ್ಯ ದೂರು ದಾರನಿಗೆ ಬುರುಡೆ ಅಗೆದ ಜಾಗವನ್ನ ತೋರಿಸುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸದ್ಯ ಅನಾಮಿಕ ಕೊಟ್ಟ ಬುರುಡೆ ಎಫ್ ಎಸ್ ಎಲ್ ಲ್ಯಾಬ್ ನಲ್ಲಿದೆ. ಆದರೆ ಈ ಬುರುಡೆ ಧರ್ಮಸ್ಥಳ ಗ್ರಾಮದಿಂದಲೇ ತೆಗೆದಿದ್ದ ಎಂಬ ಬಗ್ಗೆ ತನಿಖೆಗೆ ಎಸ್‍ಐಟಿ ಮುಂದಾಗಿದೆ. ಅನಾಮಿಕ ದೂರುದಾರನ ಮೂಲಕವೇ ಬುರುಡೆ ಅಗೆದ ಜಾಗದ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಲಿದ್ದಾರೆ.

ಜಾಗದ ಪರಿಶೀಲನೆ ಬಳಿಕ ಆ ಜಾಗದ ಮಣ್ಣಿನ ಎಫ್‍ಎಸ್‍ಎಲ್ ಪರೀಕ್ಷೆ ಕೂಡ ನಡೆಯಲಿದೆ. ಅನಾಮಿಕ ಕೊಟ್ಟ ಬುರುಡೆಯಲ್ಲಿರೋ ಮಣ್ಣಿನ ಕಣ ಮತ್ತು ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ತೋರಿಸುವ ಜಾಗದ ಮಣ್ಣಿನ ಪರೀಕ್ಷೆ ನಡೆಯಲಿದ್ದು, ಎರಡೂ ಮಣ್ಣಿನ ಕಣಗಳನ್ನು ಮ್ಯಾಚ್ ಮಾಡಿ ನೋಡಿ ಬಳಿಕ ಬುರುಡೆ ಧರ್ಮಸ್ಥಳ ಗ್ರಾಮದಲ್ಲೇ ತೆಗೆದಿದ್ದ ಅನ್ನೋದನ್ನ ಖಚಿತ ಪಡಿಸಿಕೊಳ್ಳಲು ಎಸ್‍ಐಟಿ ಮುಂದಾಗಿದೆ. ಎಸ್ ಐ ಟಿ ಅಧಿಕಾರಿಗಳು ಅನಾಮಿಕನನ್ನು ವಿಚಾರಣೆಗೆ ಒಳಪಡಿಸಿದ್ದು, ನಾನಾ ಪ್ರಶ್ನೆಗಳಿಗೆ ಉತ್ತರ ಪಡೆಯುತ್ತಿದ್ದಾರೆ. ಅನಾಮಿಕ ಹೇಳಿಕೆಯನ್ನ ಇನ್ ಕ್ಯಾಮೆರಾದಲ್ಲಿ ದಾಖಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago