ರಾಜ್ಯ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ : ಎಸ್‌ಐಟಿ ಮುಂದೆ ದೂರುದಾರ ಹಾಜರು

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ದೂರು ನೀಡಿರುವ ಅನಾಮೇಧಯ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಥಳ ಮಹಜರಿಗೆ ಸಿದ್ಧತೆ ಮಾಡಿಕೊಂಡಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ಅದರಲ್ಲೂ ಹೆಣ್ಣು ಮಕ್ಕಳ, ಮಹಿಳೆಯರನ್ನು ಅತ್ಯಾಚಾರ, ಕೊಲೆ ಮಾಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ದೂರು ನೀಡಿದ್ದು, ತಾವೇ ಹಲವಾರು ಮೃತದೇಹಗಳನ್ನು ಹೂತಿದ್ದು ಅವುಗಳನ್ನು ಹೊರತೆಗೆಯುತ್ತೇನೆಂದು ಹೇಳಿದ್ದಾರೆ.

ಎಸ್‍ಐಟಿ ಮುಖ್ಯಸ್ಥ ಅನುಚೇತ್ ಹಾಗು ಎಸ್ಪಿ ಜಿತೇಂದ್ರ ಕುಮಾರ್ ದಯಮಾ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. ವಕೀಲರ ಜೊತೆ ದೂರು ಕೊಟ್ಟ ಅನಾಮಿಕ ವಿಚಾರಣೆಗೆ ಹಾಜರಾಗಿದ್ದಾನೆ ಎನ್ನಲಾಗ್ತಿದೆ. ಅಧಿಕಾರಿಗಳು ಸಾಕ್ಷ್ಯ ದೂರು ದಾರನಿಗೆ ಬುರುಡೆ ಅಗೆದ ಜಾಗವನ್ನ ತೋರಿಸುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸದ್ಯ ಅನಾಮಿಕ ಕೊಟ್ಟ ಬುರುಡೆ ಎಫ್ ಎಸ್ ಎಲ್ ಲ್ಯಾಬ್ ನಲ್ಲಿದೆ. ಆದರೆ ಈ ಬುರುಡೆ ಧರ್ಮಸ್ಥಳ ಗ್ರಾಮದಿಂದಲೇ ತೆಗೆದಿದ್ದ ಎಂಬ ಬಗ್ಗೆ ತನಿಖೆಗೆ ಎಸ್‍ಐಟಿ ಮುಂದಾಗಿದೆ. ಅನಾಮಿಕ ದೂರುದಾರನ ಮೂಲಕವೇ ಬುರುಡೆ ಅಗೆದ ಜಾಗದ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಲಿದ್ದಾರೆ.

ಜಾಗದ ಪರಿಶೀಲನೆ ಬಳಿಕ ಆ ಜಾಗದ ಮಣ್ಣಿನ ಎಫ್‍ಎಸ್‍ಎಲ್ ಪರೀಕ್ಷೆ ಕೂಡ ನಡೆಯಲಿದೆ. ಅನಾಮಿಕ ಕೊಟ್ಟ ಬುರುಡೆಯಲ್ಲಿರೋ ಮಣ್ಣಿನ ಕಣ ಮತ್ತು ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ತೋರಿಸುವ ಜಾಗದ ಮಣ್ಣಿನ ಪರೀಕ್ಷೆ ನಡೆಯಲಿದ್ದು, ಎರಡೂ ಮಣ್ಣಿನ ಕಣಗಳನ್ನು ಮ್ಯಾಚ್ ಮಾಡಿ ನೋಡಿ ಬಳಿಕ ಬುರುಡೆ ಧರ್ಮಸ್ಥಳ ಗ್ರಾಮದಲ್ಲೇ ತೆಗೆದಿದ್ದ ಅನ್ನೋದನ್ನ ಖಚಿತ ಪಡಿಸಿಕೊಳ್ಳಲು ಎಸ್‍ಐಟಿ ಮುಂದಾಗಿದೆ. ಎಸ್ ಐ ಟಿ ಅಧಿಕಾರಿಗಳು ಅನಾಮಿಕನನ್ನು ವಿಚಾರಣೆಗೆ ಒಳಪಡಿಸಿದ್ದು, ನಾನಾ ಪ್ರಶ್ನೆಗಳಿಗೆ ಉತ್ತರ ಪಡೆಯುತ್ತಿದ್ದಾರೆ. ಅನಾಮಿಕ ಹೇಳಿಕೆಯನ್ನ ಇನ್ ಕ್ಯಾಮೆರಾದಲ್ಲಿ ದಾಖಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

5 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

5 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

5 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

6 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

6 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

6 hours ago