Dharmasthala case PAN card torn blouse found excavation continues
ಬೆಂಗಳೂರು : ಧರ್ಮಸ್ಥಳದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತನಿಖೆ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವರೆಗೂ ಗೃಹ ಸಚಿವ ಡಾ.ಜಿ. ಪರಮೇಶ್ವರನ್ನು ಭೇಟಿಯಾಗುತ್ತಿದ್ದ ಪ್ರಣಬ್ ಮೊಹಾಂತಿ ಇಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ರಾಶಿ-ರಾಶಿ ಅಸ್ಥಿಪಂಜರಗಳಿವೆ ಎಂದು ಸೌಜನ್ಯ ಅವರ ಮಾವ ವಿಠಲ್ಗೌಡ ಹೇಳಿಕೆ ನೀಡಿದ್ದರು. ಈ ಸಂಬಂಧಪಟ್ಟಂತೆ ಮತ್ತೇ ಉತ್ಖನನವನ್ನು ಮುಂದುವರೆಸಬೇಕೆ? ಬೇಡವೇ? ಎಂಬ ನಿಟ್ಟಿನಲ್ಲಿ ಎಸ್ಐಟಿ ಅಧಿಕಾರಿಗಳು ಭಾನುವಾರ ಸಭೆ ನಡೆಸಿ ಚರ್ಚೆ ನಡೆಸಿದ್ದರು.
ಉತ್ಖನನಕ್ಕೆ ಸಂಬಂಧಪಟ್ಟಂತೆ ಒಮ್ಮತದ ಅಭಿಪ್ರಾಯ ಕಂಡು ಬಂದಿಲ್ಲ. ಜೊತೆಗೆ ಬಂಗ್ಲೆಗುಡ್ಡ ಅರಣ್ಯ ಪ್ರದೇಶವಾಗಿರುವುದರಿಂದ ಅಲ್ಲಿ ಉತ್ಖನನ ನಡೆಸಿದರೆ ಎದುರಾಗಬಹುದಾದ ಸಾಧಕ-ಬಾಧಕಗಳು, ಕಾನೂನಿನ ತೊಡಕುಗಳು ತೀವ್ರ ಸ್ವರೂಪದಲ್ಲಿವೆ. ಅರಣ್ಯ ಇಲಾಖೆ ಪೂರ್ವಾನುಮತಿಯಿಲ್ಲದೆ ಉತ್ಖನನ ನಡೆಸುವುದು ಕಷ್ಟಸಾಧ್ಯ. ಅರಣ್ಯ ಇಲಾಖೆ ಅನುಮತಿ ಪಡೆಯುವುದು ಕೂಡ ಅಷ್ಟೆ ಕ್ಲಿಷ್ಟ ಸಮಸ್ಯೆಯಾಗಿದೆ. ಈಗಾಗಲೇ ಸಾಕಷ್ಟು ಪ್ರದೇಶಗಳಲ್ಲಿ ಉತ್ಖನನ ನಡೆಸಲಾಗಿದೆ. ಅದರೆ ಮಹತ್ವ ಸುಳಿವುಗಳು ಅಥವಾ ಪುರಾವೆಗಳು ದೊರೆತ್ತಿಲ್ಲ.
ಚಿನ್ನಯ್ಯ ಮಾಹಿತಿ ನೀಡಿದ ಆಧಾರದ ಮೇಲೆ ಎಸ್ಐಟಿ ಅಧಿಕಾರಿಗಳು ನಡೆಸಿದ ಉತ್ಖನನ ವ್ಯಾಪಕ ಟೀಕೆಗೂ ಗುರಿಯಾಗಿತ್ತು. ಚಿನ್ನಯ್ಯನನ್ನು ಬಂಧಿಸಿ ಎಸ್ಐಟಿ ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳುವ ಪ್ರಯತ್ನ ನಡೆಸಿದೆ. ಈಗ ಸೌಜನ್ಯ ಅವರ ಮಾವ ಅದೇ ರೀತಿಯ ಹೇಳಿಕೆಗಳನ್ನು ನೀಡಿ ಹೊಸ ವಿವಾದಗಳನ್ನು ಹುಟ್ಟುಹಾಕಿದ್ದಾರೆ. ವಿಠಲ್ಗೌಡ ಅವರ ಹೇಳಿಕೆಯನ್ನು ಕಡೆಗಣಿಸುವಂತೆಯೂ ಇಲ್ಲ ಅಥವಾ ಅವರು ಹೇಳಿದಾಕ್ಷಣ ಉತ್ಖನನ ನಡಸುವುದು ಕೂಡ ಕಷ್ಟಸಾಧ್ಯ ಎಂಬ ಧರ್ಮ ಸಂಕಟದಲ್ಲಿರುವ ಎಸ್ಐಟಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಲಹೆ ಕೇಳಿದ್ದಾರೆ ಎನ್ನಲಾಗಿದೆ.
ಜೊತೆಗೆ ಈವರೆಗೂ ನಡೆದಿರುವ ತನಿಖೆಯ ಪ್ರಗತಿಯನ್ನು ಮುಖ್ಯಮಂತ್ರಿ ಅವರಿಗೆ ಪ್ರಣಬ್ ಮೊಹಾಂತಿ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…