ರಾಜ್ಯ

ಧರ್ಮಸ್ಥಳ | ಸಿಎಂ ಭೇಟಿಯಾಗಿ ಚರ್ಚೆ ನಡೆಸಿದ ಎಸ್‌ಐಟಿ ಮುಖ್ಯಸ್ಥ

ಬೆಂಗಳೂರು : ಧರ್ಮಸ್ಥಳದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಎಸ್‍ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತನಿಖೆ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವರೆಗೂ ಗೃಹ ಸಚಿವ ಡಾ.ಜಿ. ಪರಮೇಶ್ವರನ್ನು ಭೇಟಿಯಾಗುತ್ತಿದ್ದ ಪ್ರಣಬ್ ಮೊಹಾಂತಿ ಇಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ರಾಶಿ-ರಾಶಿ ಅಸ್ಥಿಪಂಜರಗಳಿವೆ ಎಂದು ಸೌಜನ್ಯ ಅವರ ಮಾವ ವಿಠಲ್‍ಗೌಡ ಹೇಳಿಕೆ ನೀಡಿದ್ದರು. ಈ ಸಂಬಂಧಪಟ್ಟಂತೆ ಮತ್ತೇ ಉತ್ಖನನವನ್ನು ಮುಂದುವರೆಸಬೇಕೆ? ಬೇಡವೇ? ಎಂಬ ನಿಟ್ಟಿನಲ್ಲಿ ಎಸ್‍ಐಟಿ ಅಧಿಕಾರಿಗಳು ಭಾನುವಾರ ಸಭೆ ನಡೆಸಿ ಚರ್ಚೆ ನಡೆಸಿದ್ದರು.

ಉತ್ಖನನಕ್ಕೆ ಸಂಬಂಧಪಟ್ಟಂತೆ ಒಮ್ಮತದ ಅಭಿಪ್ರಾಯ ಕಂಡು ಬಂದಿಲ್ಲ. ಜೊತೆಗೆ ಬಂಗ್ಲೆಗುಡ್ಡ ಅರಣ್ಯ ಪ್ರದೇಶವಾಗಿರುವುದರಿಂದ ಅಲ್ಲಿ ಉತ್ಖನನ ನಡೆಸಿದರೆ ಎದುರಾಗಬಹುದಾದ ಸಾಧಕ-ಬಾಧಕಗಳು, ಕಾನೂನಿನ ತೊಡಕುಗಳು ತೀವ್ರ ಸ್ವರೂಪದಲ್ಲಿವೆ. ಅರಣ್ಯ ಇಲಾಖೆ ಪೂರ್ವಾನುಮತಿಯಿಲ್ಲದೆ ಉತ್ಖನನ ನಡೆಸುವುದು ಕಷ್ಟಸಾಧ್ಯ. ಅರಣ್ಯ ಇಲಾಖೆ ಅನುಮತಿ ಪಡೆಯುವುದು ಕೂಡ ಅಷ್ಟೆ ಕ್ಲಿಷ್ಟ ಸಮಸ್ಯೆಯಾಗಿದೆ. ಈಗಾಗಲೇ ಸಾಕಷ್ಟು ಪ್ರದೇಶಗಳಲ್ಲಿ ಉತ್ಖನನ ನಡೆಸಲಾಗಿದೆ. ಅದರೆ ಮಹತ್ವ ಸುಳಿವುಗಳು ಅಥವಾ ಪುರಾವೆಗಳು ದೊರೆತ್ತಿಲ್ಲ.

ಚಿನ್ನಯ್ಯ ಮಾಹಿತಿ ನೀಡಿದ ಆಧಾರದ ಮೇಲೆ ಎಸ್‍ಐಟಿ ಅಧಿಕಾರಿಗಳು ನಡೆಸಿದ ಉತ್ಖನನ ವ್ಯಾಪಕ ಟೀಕೆಗೂ ಗುರಿಯಾಗಿತ್ತು. ಚಿನ್ನಯ್ಯನನ್ನು ಬಂಧಿಸಿ ಎಸ್‍ಐಟಿ ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳುವ ಪ್ರಯತ್ನ ನಡೆಸಿದೆ. ಈಗ ಸೌಜನ್ಯ ಅವರ ಮಾವ ಅದೇ ರೀತಿಯ ಹೇಳಿಕೆಗಳನ್ನು ನೀಡಿ ಹೊಸ ವಿವಾದಗಳನ್ನು ಹುಟ್ಟುಹಾಕಿದ್ದಾರೆ. ವಿಠಲ್‍ಗೌಡ ಅವರ ಹೇಳಿಕೆಯನ್ನು ಕಡೆಗಣಿಸುವಂತೆಯೂ ಇಲ್ಲ ಅಥವಾ ಅವರು ಹೇಳಿದಾಕ್ಷಣ ಉತ್ಖನನ ನಡಸುವುದು ಕೂಡ ಕಷ್ಟಸಾಧ್ಯ ಎಂಬ ಧರ್ಮ ಸಂಕಟದಲ್ಲಿರುವ ಎಸ್‍ಐಟಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಲಹೆ ಕೇಳಿದ್ದಾರೆ ಎನ್ನಲಾಗಿದೆ.

ಜೊತೆಗೆ ಈವರೆಗೂ ನಡೆದಿರುವ ತನಿಖೆಯ ಪ್ರಗತಿಯನ್ನು ಮುಖ್ಯಮಂತ್ರಿ ಅವರಿಗೆ ಪ್ರಣಬ್ ಮೊಹಾಂತಿ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

42 mins ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

54 mins ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

1 hour ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

1 hour ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

1 hour ago

ಮಡಿಕೇರಿ| ಕಾಡಾನೆ ದಾಳಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…

2 hours ago