Dharmasthala case PAN card torn blouse found excavation continues
ಬೆಂಗಳೂರು : ಧರ್ಮಸ್ಥಳದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತನಿಖೆ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವರೆಗೂ ಗೃಹ ಸಚಿವ ಡಾ.ಜಿ. ಪರಮೇಶ್ವರನ್ನು ಭೇಟಿಯಾಗುತ್ತಿದ್ದ ಪ್ರಣಬ್ ಮೊಹಾಂತಿ ಇಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ರಾಶಿ-ರಾಶಿ ಅಸ್ಥಿಪಂಜರಗಳಿವೆ ಎಂದು ಸೌಜನ್ಯ ಅವರ ಮಾವ ವಿಠಲ್ಗೌಡ ಹೇಳಿಕೆ ನೀಡಿದ್ದರು. ಈ ಸಂಬಂಧಪಟ್ಟಂತೆ ಮತ್ತೇ ಉತ್ಖನನವನ್ನು ಮುಂದುವರೆಸಬೇಕೆ? ಬೇಡವೇ? ಎಂಬ ನಿಟ್ಟಿನಲ್ಲಿ ಎಸ್ಐಟಿ ಅಧಿಕಾರಿಗಳು ಭಾನುವಾರ ಸಭೆ ನಡೆಸಿ ಚರ್ಚೆ ನಡೆಸಿದ್ದರು.
ಉತ್ಖನನಕ್ಕೆ ಸಂಬಂಧಪಟ್ಟಂತೆ ಒಮ್ಮತದ ಅಭಿಪ್ರಾಯ ಕಂಡು ಬಂದಿಲ್ಲ. ಜೊತೆಗೆ ಬಂಗ್ಲೆಗುಡ್ಡ ಅರಣ್ಯ ಪ್ರದೇಶವಾಗಿರುವುದರಿಂದ ಅಲ್ಲಿ ಉತ್ಖನನ ನಡೆಸಿದರೆ ಎದುರಾಗಬಹುದಾದ ಸಾಧಕ-ಬಾಧಕಗಳು, ಕಾನೂನಿನ ತೊಡಕುಗಳು ತೀವ್ರ ಸ್ವರೂಪದಲ್ಲಿವೆ. ಅರಣ್ಯ ಇಲಾಖೆ ಪೂರ್ವಾನುಮತಿಯಿಲ್ಲದೆ ಉತ್ಖನನ ನಡೆಸುವುದು ಕಷ್ಟಸಾಧ್ಯ. ಅರಣ್ಯ ಇಲಾಖೆ ಅನುಮತಿ ಪಡೆಯುವುದು ಕೂಡ ಅಷ್ಟೆ ಕ್ಲಿಷ್ಟ ಸಮಸ್ಯೆಯಾಗಿದೆ. ಈಗಾಗಲೇ ಸಾಕಷ್ಟು ಪ್ರದೇಶಗಳಲ್ಲಿ ಉತ್ಖನನ ನಡೆಸಲಾಗಿದೆ. ಅದರೆ ಮಹತ್ವ ಸುಳಿವುಗಳು ಅಥವಾ ಪುರಾವೆಗಳು ದೊರೆತ್ತಿಲ್ಲ.
ಚಿನ್ನಯ್ಯ ಮಾಹಿತಿ ನೀಡಿದ ಆಧಾರದ ಮೇಲೆ ಎಸ್ಐಟಿ ಅಧಿಕಾರಿಗಳು ನಡೆಸಿದ ಉತ್ಖನನ ವ್ಯಾಪಕ ಟೀಕೆಗೂ ಗುರಿಯಾಗಿತ್ತು. ಚಿನ್ನಯ್ಯನನ್ನು ಬಂಧಿಸಿ ಎಸ್ಐಟಿ ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳುವ ಪ್ರಯತ್ನ ನಡೆಸಿದೆ. ಈಗ ಸೌಜನ್ಯ ಅವರ ಮಾವ ಅದೇ ರೀತಿಯ ಹೇಳಿಕೆಗಳನ್ನು ನೀಡಿ ಹೊಸ ವಿವಾದಗಳನ್ನು ಹುಟ್ಟುಹಾಕಿದ್ದಾರೆ. ವಿಠಲ್ಗೌಡ ಅವರ ಹೇಳಿಕೆಯನ್ನು ಕಡೆಗಣಿಸುವಂತೆಯೂ ಇಲ್ಲ ಅಥವಾ ಅವರು ಹೇಳಿದಾಕ್ಷಣ ಉತ್ಖನನ ನಡಸುವುದು ಕೂಡ ಕಷ್ಟಸಾಧ್ಯ ಎಂಬ ಧರ್ಮ ಸಂಕಟದಲ್ಲಿರುವ ಎಸ್ಐಟಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಲಹೆ ಕೇಳಿದ್ದಾರೆ ಎನ್ನಲಾಗಿದೆ.
ಜೊತೆಗೆ ಈವರೆಗೂ ನಡೆದಿರುವ ತನಿಖೆಯ ಪ್ರಗತಿಯನ್ನು ಮುಖ್ಯಮಂತ್ರಿ ಅವರಿಗೆ ಪ್ರಣಬ್ ಮೊಹಾಂತಿ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…
ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…