ರಾಜ್ಯ

ಧರ್ಮಸ್ಥಳ | ಮತ್ತೆ ಉತ್ಖನನ ಚಿಂತನೆ ನಡೆಸಿದ ಎಸ್‌ಐಟಿ

ಬೆಂಗಳೂರು : ಧರ್ಮಸ್ಥಳ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದ್ದು, ರಜಾ ದಿನವನ್ನು ಲೆಕ್ಕಿಸದೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ತನಿಖಾ ತಂಡದ ಜೊತೆ ಭಾನುವಾರ ಮಹತ್ವದ ಸಭೆ ನಡೆಸಿದ್ದಾರೆ.

ಸಾಮಾನ್ಯವಾಗಿ ಭಾನುವಾರ ತನಿಖೆ ಹಾಗೂ ವಿಚಾರಣೆಗೆ ಎಸ್‌ಐಟಿ ತಂಡ ವಿರಾಮ ನೀಡುತ್ತಿತ್ತು. ಆದರೆ ಸೌಜನ್ಯ ಅವರ ಮಾವ ವಿಠಲ್‌ಗೌಡ ಅವರ ಹೇಳಿಕೆ ಗಂಭೀರ ಸ್ವರೂಪಕ್ಕೆ ತಿರುಗಿದ್ದು, ಇದನ್ನು ಆಧರಿಸಿ, ಬಂಗ್ಲೆಗುಡ್ಡದಲ್ಲಿ ಉತ್ಖನನ ನಡೆಸಬೇಕೇ? ಬೇಡವೇ? ಎಂಬ ಬಗ್ಗೆ ಸುದೀರ್ಘ ಸಮಾಲೋಚನೆಯಾಗಿದೆ.

ಎಸ್‌ಐಟಿ ತಂಡದ ತನಿಖಾಧಿಕಾರಿ ಜಿತೇಂದ್ರಕುಮಾರ್ ದಯಾಮ, ಸಿ.ಎ.ಸೈಮನ್ ಮತ್ತಿತರರು ಸಭೆಯಲ್ಲಿದ್ದರು. ನೇತ್ರಾವತಿ ದಂಡೆಯಲ್ಲಿರುವ ಬಂಗ್ಲೆಗುಡ್ಡ ಕಾಡಿನಲ್ಲಿ ಮಾನವ ಅವಶೇಷಗಳ ರಾಶಿಯೇ ದೊರೆತಿದೆ ಎಂದು ವಿಠಲ್‌ಗೌಡ ಹೇಳಿಕೆ ನೀಡಿದರು. ತಮ್ಮನ್ನು ಅಲ್ಲಿಗೆ ಎಸ್‌ಐಟಿ ತಂಡ ಕರೆದುಕೊಂಡು ಹೋದಾಗ ಮೊದಲ ದಿನ ೫ ಹಾಗೂ ಎರಡನೇ ದಿನ ೩ ಅಸ್ಥಿಪಂಜರಗಳನ್ನು ನೋಡಿದ್ದಾಗಿ ವಿಠಲ್‌ಗೌಡ ಹೇಳಿದರು. ಅಸ್ಥಿಪಂಜರಗಳ ಪೈಕಿ ಚಿಕ್ಕ ಮಗುವಿನ ಕಳೇಬರವನ್ನು ತಾವು ಕಂಡಿದ್ದಾಗಿ ತಿಳಿಸಿದರು.

ಇದು ಭಾರೀ ಸಂಚಲನ ಮೂಡಿಸಿತ್ತು. ಈ ಹಿಂದೆ ಚಿನ್ನಯ್ಯ ಇದೇ ರೀತಿಯ ಹೇಳಿಕೆ ನೀಡಿ, ಭಾರೀ ಗೊಂದಲ ಮೂಡಿಸಿದ್ದರು. ಆತ ಗುರುತಿಸಿದ ಜಾಗದಲ್ಲಿ ಎಸ್‌ಐಟಿ ಉತ್ಖನನ ನಡೆಸಿದಾಗ ಹೆಚ್ಚಿನ ಅಸ್ಥಿಪಂಜರಗಳು ದೊರೆಯದ ಕಾರಣಕ್ಕೆ ಪ್ರಯತ್ನ ವ್ಯರ್ಥವಾಗಿತ್ತು. ತಪ್ಪ ಮಾಹಿತಿ ನೀಡಿ, ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಕಾರಣವಾಗಿದ್ದ ಚಿನ್ನಯ್ಯನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಈಗ ಸೌಜನ್ಯ ಅವರ ಮಾವ ವಿಠಲ್‌ಗೌಡ ಅದೇ ಮಾದರಿಯಲ್ಲಿ ಹೇಳಿಕೆಗಳನ್ನು ನೀಡಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ. ಬಂಗ್ಲೆಗುಡ್ಡದಲ್ಲಿ ಮಾನವ ಅಸ್ಥಿಪಂಜರಗಳಿವೆ ಎಂದು ಹೇಳಿರುವ ವಿಠಲ್‌ಗೌಡ ಅವರ ಹೇಳಿಕೆ ಆಧರಿಸಿಯೇ ಭಾನುವಾರದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಎಸ್‌ಐಟಿ ಮುಖ್ಯಸ್ಥರಾದ ಪ್ರಣಬ್ ಮೊಹಾಂತಿ ಭಾನುವಾರ ಬೆಳ್ತಂಗಡಿಗೆ ಭೇಟಿ ನೀಡಿ, ತನಿಖಾ ತಂಡದ ಜೊತೆ ಸುದೀರ್ಘ ಸಮಾಲೋಚನೆ ನಡೆಸಿದ್ದರು. ಇದೇ ಸಂದರ್ಭದಲ್ಲಿ ಈವರೆಗಿನ ತನಿಖೆಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಅದರ ಜೊತೆಗೆ ಬಂಗ್ಲೆಗುಡ್ಡದಲ್ಲಿ ಉತ್ಖನನ ನಡೆಸುವ ಬಗ್ಗೆಯೂ ಚರ್ಚೆಗಳಾಗಿವೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

7 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

11 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

12 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

12 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

12 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

12 hours ago