ರಾಜ್ಯ

ಧರ್ಮಸ್ಥಳ | ಮತ್ತೆ ಉತ್ಖನನ ಚಿಂತನೆ ನಡೆಸಿದ ಎಸ್‌ಐಟಿ

ಬೆಂಗಳೂರು : ಧರ್ಮಸ್ಥಳ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದ್ದು, ರಜಾ ದಿನವನ್ನು ಲೆಕ್ಕಿಸದೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ತನಿಖಾ ತಂಡದ ಜೊತೆ ಭಾನುವಾರ ಮಹತ್ವದ ಸಭೆ ನಡೆಸಿದ್ದಾರೆ.

ಸಾಮಾನ್ಯವಾಗಿ ಭಾನುವಾರ ತನಿಖೆ ಹಾಗೂ ವಿಚಾರಣೆಗೆ ಎಸ್‌ಐಟಿ ತಂಡ ವಿರಾಮ ನೀಡುತ್ತಿತ್ತು. ಆದರೆ ಸೌಜನ್ಯ ಅವರ ಮಾವ ವಿಠಲ್‌ಗೌಡ ಅವರ ಹೇಳಿಕೆ ಗಂಭೀರ ಸ್ವರೂಪಕ್ಕೆ ತಿರುಗಿದ್ದು, ಇದನ್ನು ಆಧರಿಸಿ, ಬಂಗ್ಲೆಗುಡ್ಡದಲ್ಲಿ ಉತ್ಖನನ ನಡೆಸಬೇಕೇ? ಬೇಡವೇ? ಎಂಬ ಬಗ್ಗೆ ಸುದೀರ್ಘ ಸಮಾಲೋಚನೆಯಾಗಿದೆ.

ಎಸ್‌ಐಟಿ ತಂಡದ ತನಿಖಾಧಿಕಾರಿ ಜಿತೇಂದ್ರಕುಮಾರ್ ದಯಾಮ, ಸಿ.ಎ.ಸೈಮನ್ ಮತ್ತಿತರರು ಸಭೆಯಲ್ಲಿದ್ದರು. ನೇತ್ರಾವತಿ ದಂಡೆಯಲ್ಲಿರುವ ಬಂಗ್ಲೆಗುಡ್ಡ ಕಾಡಿನಲ್ಲಿ ಮಾನವ ಅವಶೇಷಗಳ ರಾಶಿಯೇ ದೊರೆತಿದೆ ಎಂದು ವಿಠಲ್‌ಗೌಡ ಹೇಳಿಕೆ ನೀಡಿದರು. ತಮ್ಮನ್ನು ಅಲ್ಲಿಗೆ ಎಸ್‌ಐಟಿ ತಂಡ ಕರೆದುಕೊಂಡು ಹೋದಾಗ ಮೊದಲ ದಿನ ೫ ಹಾಗೂ ಎರಡನೇ ದಿನ ೩ ಅಸ್ಥಿಪಂಜರಗಳನ್ನು ನೋಡಿದ್ದಾಗಿ ವಿಠಲ್‌ಗೌಡ ಹೇಳಿದರು. ಅಸ್ಥಿಪಂಜರಗಳ ಪೈಕಿ ಚಿಕ್ಕ ಮಗುವಿನ ಕಳೇಬರವನ್ನು ತಾವು ಕಂಡಿದ್ದಾಗಿ ತಿಳಿಸಿದರು.

ಇದು ಭಾರೀ ಸಂಚಲನ ಮೂಡಿಸಿತ್ತು. ಈ ಹಿಂದೆ ಚಿನ್ನಯ್ಯ ಇದೇ ರೀತಿಯ ಹೇಳಿಕೆ ನೀಡಿ, ಭಾರೀ ಗೊಂದಲ ಮೂಡಿಸಿದ್ದರು. ಆತ ಗುರುತಿಸಿದ ಜಾಗದಲ್ಲಿ ಎಸ್‌ಐಟಿ ಉತ್ಖನನ ನಡೆಸಿದಾಗ ಹೆಚ್ಚಿನ ಅಸ್ಥಿಪಂಜರಗಳು ದೊರೆಯದ ಕಾರಣಕ್ಕೆ ಪ್ರಯತ್ನ ವ್ಯರ್ಥವಾಗಿತ್ತು. ತಪ್ಪ ಮಾಹಿತಿ ನೀಡಿ, ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಕಾರಣವಾಗಿದ್ದ ಚಿನ್ನಯ್ಯನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಈಗ ಸೌಜನ್ಯ ಅವರ ಮಾವ ವಿಠಲ್‌ಗೌಡ ಅದೇ ಮಾದರಿಯಲ್ಲಿ ಹೇಳಿಕೆಗಳನ್ನು ನೀಡಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ. ಬಂಗ್ಲೆಗುಡ್ಡದಲ್ಲಿ ಮಾನವ ಅಸ್ಥಿಪಂಜರಗಳಿವೆ ಎಂದು ಹೇಳಿರುವ ವಿಠಲ್‌ಗೌಡ ಅವರ ಹೇಳಿಕೆ ಆಧರಿಸಿಯೇ ಭಾನುವಾರದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಎಸ್‌ಐಟಿ ಮುಖ್ಯಸ್ಥರಾದ ಪ್ರಣಬ್ ಮೊಹಾಂತಿ ಭಾನುವಾರ ಬೆಳ್ತಂಗಡಿಗೆ ಭೇಟಿ ನೀಡಿ, ತನಿಖಾ ತಂಡದ ಜೊತೆ ಸುದೀರ್ಘ ಸಮಾಲೋಚನೆ ನಡೆಸಿದ್ದರು. ಇದೇ ಸಂದರ್ಭದಲ್ಲಿ ಈವರೆಗಿನ ತನಿಖೆಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಅದರ ಜೊತೆಗೆ ಬಂಗ್ಲೆಗುಡ್ಡದಲ್ಲಿ ಉತ್ಖನನ ನಡೆಸುವ ಬಗ್ಗೆಯೂ ಚರ್ಚೆಗಳಾಗಿವೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago