ರಾಜ್ಯ

ಧರ್ಮಸ್ಥಳ | 7ನೇ ದಿನಕ್ಕೆ ಕಾಲಿಟ್ಟ ಎಸ್‌ಐಟಿ ತನಿಖೆ

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ಸಾಕ್ಷಿ ದೂರುದಾರ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದೆ.

ಮೃತದೇಹಗಳ ಅವಶೇಷ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಮಂಗಳವಾರ 7ನೇ ದಿನಕ್ಕೆ ಕಾಲಿಟ್ಟಿತು. ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಸಾಕ್ಷಿ ದೂರುದಾರ ಈ ಹಿಂದೆ ಗುರುತಿಸಿದ್ದ 11ನೇ ಸ್ಥಳದಲ್ಲಿ ಎಸ್‌ಐಟಿ ಶೋಧ ಕಾರ್ಯ ನಡೆಸಿತು. ಈ ಹಿಂದೆ ತೋರಿಸಿದ್ದ 11ನೇ ಜಾಗಕ್ಕಿಂತ ಮುಂದಕ್ಕೆ ಕಾಡಿನೊಳಗೆ ಎಸ್‌ಐಟಿ ಅಧಿಕಾರಿಗಳನ್ನು ಕರೆದೊಯ್ದಿದ್ದು, ಅಲ್ಲಿ ನೆಲದ ಮೇಲೆಯೇ ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ ಎಂದು ತಿಳಿದುಬಂದಿದೆ.

ಈ ಅಸ್ಥಿಪಂಜರಗಳನ್ನು ತಜ್ಞರ ತಂಡ ವೈಜ್ಞಾನಿಕವಾಗಿ ಸಂಗ್ರಹ ಮಾಡಿದ್ದು, ಅದನ್ನು ಮಣಿಪಾಲದ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.4ರಂದು ಪ್ರಕರಣ ದಾಖಲಾದ ಬಳಿಕ ಈ ವಿಚಾರ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಜುಲೈ 19 ರಂದು ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

3 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

3 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

3 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

3 hours ago