ರಾಜ್ಯ

ಧರ್ಮಸ್ಥಳ ಎಸ್‌ಐಟಿ ತನಿಖೆ; ರಾಜಕೀಯ ಬೇಡ: ಡಿಕೆಶಿ

ಬೆಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿರುವುದಾಗಿ ಹೇಳಿರುವ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು.

ನಿಯಮ ೬೯ರಡಿ ವಿ.ಸುನೀಲ್‌ಕುಮಾರ್ ವಿಷಯ ಪ್ರಸ್ತಾಪಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಮಗಿಂತ ಹೆಚ್ಚು ನಮ್ಮ ಶಾಸಕರು ಗೌರವ ಹೊಂದಿದ್ದಾರೆ. ನಮ್ಮ ಶಾಸಕಾಂಗ ಸಭೆಯಲ್ಲೂ ಭಕ್ತ-ಭಗವಂತನ ನಡುವಿನ ಸಂಬಂಧ ಹಾಳಾಗಬಾರದು ಎಂಬ ಚರ್ಚೆಯಾಗಿದೆ ಎಂದರು.

ಮಾತು ಬಿಡದ ಧರ್ಮಸ್ಥಳದ ಮಂಜುನಾಥ, ಕಾಸು ಬಿಡದ ತಿಮಪ್ಪ ಎಂಬ ಮಾತಿದೆ. ಧರ್ಮಸ್ಥಳದ ಬಗ್ಗೆ ನನಗೆ ನಂಬಿಕೆ, ಭಕ್ತಿ ಇದೆ. ಲಕ್ಷಾಂತರ ಭಕ್ತರು ಆರಾಧಿಸುತ್ತಾರೆ. ಅಲ್ಲಿ ಅನ್ನದಾಸೋಹ ನಡೆಯುತ್ತದೆ. ಅಲ್ಲಿ ನಡೆಯುತ್ತಿರುವ ಸೇವೆ ಬಗ್ಗೆ ಅನುಮಾನವಿಲ್ಲ. ಕ್ಷೇತ್ರದ ಬಗ್ಗೆಯಾಗಲಿ, ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಬಗ್ಗೆಯಾಗಲಿ ಅಲ್ಲಿನ ಪರಂಪರೆಯ ಬಗ್ಗೆ ನಿಮಗಿಂತ ಹೆಚ್ಚು ಕಾಳಜಿ ಇದೆ. ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರವಾಗುತ್ತಿದೆ. ರೋಷ-ದ್ವೇಷ ಏನೂ ಇಲ್ಲ. ಧರ್ಮಸ್ಥಳದ ಬಗ್ಗೆ ನಮ್ಮ ನಂಬಿಕೆ ಅಚಲವಾಗಿದೆ ಎಂದು ಹೇಳಿದರು.

ಬಿಜೆಪಿ ಹಿರಿಯ ಶಾಸಕ ಎಸ್.ಸುರೇಶ್‌ಕುಮಾರ್ ಮಾತನಾಡಿ, ಶಿವಕುಮಾರ್ ಭಕ್ತನಾಗಿ ಹೇಳಿದ್ದಾರೆಯೋ, ಡಿಸಿಎಂ ಆಗಿ ಹೇಳಿದ್ದಾರೋ ಗೊತ್ತಿಲ್ಲ. ಎಸ್‌ಐಟಿ ರಚನೆ ಮಾಡುವ ಹಿಂದಿನ ದಿನ ದಕ್ಷಿಣ ಕನ್ನಡ ಪೊಲೀಸರೇ ತನಿಖೆ ನಡೆಸಲು ದಕ್ಷರಾಗಿದ್ದಾರೆ ಎಂದು ಹೇಳಿದ್ದರು. ಸರ್ಕಾರದ ಹೇಳಿಕೆ ನೋಡಿದರೆ ಹೇಳಿಕೆಗೂ ನಡುವಳಿಕೆಗೂ ಸಂಬಂಧವಿಲ್ಲದಂತಾಗಿದೆ. ಅನಾಮಿಕನನ್ನು ಎಸ್‌ಐಟಿ ಕಸ್ಟಡಿಯಲ್ಲಿಟ್ಟುಕೊಳ್ಳಬೇಕು. ಧರ್ಮಸ್ಥಳಕ್ಕೆ ನುಗ್ಗುತ್ತೇವೆ ಎಂದು ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಕ್ರಮವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago