ರಾಜ್ಯ

ಧರ್ಮಸ್ಥಳ ಎಸ್‌ಐಟಿ ತನಿಖೆ; ರಾಜಕೀಯ ಬೇಡ: ಡಿಕೆಶಿ

ಬೆಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿರುವುದಾಗಿ ಹೇಳಿರುವ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು.

ನಿಯಮ ೬೯ರಡಿ ವಿ.ಸುನೀಲ್‌ಕುಮಾರ್ ವಿಷಯ ಪ್ರಸ್ತಾಪಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಮಗಿಂತ ಹೆಚ್ಚು ನಮ್ಮ ಶಾಸಕರು ಗೌರವ ಹೊಂದಿದ್ದಾರೆ. ನಮ್ಮ ಶಾಸಕಾಂಗ ಸಭೆಯಲ್ಲೂ ಭಕ್ತ-ಭಗವಂತನ ನಡುವಿನ ಸಂಬಂಧ ಹಾಳಾಗಬಾರದು ಎಂಬ ಚರ್ಚೆಯಾಗಿದೆ ಎಂದರು.

ಮಾತು ಬಿಡದ ಧರ್ಮಸ್ಥಳದ ಮಂಜುನಾಥ, ಕಾಸು ಬಿಡದ ತಿಮಪ್ಪ ಎಂಬ ಮಾತಿದೆ. ಧರ್ಮಸ್ಥಳದ ಬಗ್ಗೆ ನನಗೆ ನಂಬಿಕೆ, ಭಕ್ತಿ ಇದೆ. ಲಕ್ಷಾಂತರ ಭಕ್ತರು ಆರಾಧಿಸುತ್ತಾರೆ. ಅಲ್ಲಿ ಅನ್ನದಾಸೋಹ ನಡೆಯುತ್ತದೆ. ಅಲ್ಲಿ ನಡೆಯುತ್ತಿರುವ ಸೇವೆ ಬಗ್ಗೆ ಅನುಮಾನವಿಲ್ಲ. ಕ್ಷೇತ್ರದ ಬಗ್ಗೆಯಾಗಲಿ, ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಬಗ್ಗೆಯಾಗಲಿ ಅಲ್ಲಿನ ಪರಂಪರೆಯ ಬಗ್ಗೆ ನಿಮಗಿಂತ ಹೆಚ್ಚು ಕಾಳಜಿ ಇದೆ. ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರವಾಗುತ್ತಿದೆ. ರೋಷ-ದ್ವೇಷ ಏನೂ ಇಲ್ಲ. ಧರ್ಮಸ್ಥಳದ ಬಗ್ಗೆ ನಮ್ಮ ನಂಬಿಕೆ ಅಚಲವಾಗಿದೆ ಎಂದು ಹೇಳಿದರು.

ಬಿಜೆಪಿ ಹಿರಿಯ ಶಾಸಕ ಎಸ್.ಸುರೇಶ್‌ಕುಮಾರ್ ಮಾತನಾಡಿ, ಶಿವಕುಮಾರ್ ಭಕ್ತನಾಗಿ ಹೇಳಿದ್ದಾರೆಯೋ, ಡಿಸಿಎಂ ಆಗಿ ಹೇಳಿದ್ದಾರೋ ಗೊತ್ತಿಲ್ಲ. ಎಸ್‌ಐಟಿ ರಚನೆ ಮಾಡುವ ಹಿಂದಿನ ದಿನ ದಕ್ಷಿಣ ಕನ್ನಡ ಪೊಲೀಸರೇ ತನಿಖೆ ನಡೆಸಲು ದಕ್ಷರಾಗಿದ್ದಾರೆ ಎಂದು ಹೇಳಿದ್ದರು. ಸರ್ಕಾರದ ಹೇಳಿಕೆ ನೋಡಿದರೆ ಹೇಳಿಕೆಗೂ ನಡುವಳಿಕೆಗೂ ಸಂಬಂಧವಿಲ್ಲದಂತಾಗಿದೆ. ಅನಾಮಿಕನನ್ನು ಎಸ್‌ಐಟಿ ಕಸ್ಟಡಿಯಲ್ಲಿಟ್ಟುಕೊಳ್ಳಬೇಕು. ಧರ್ಮಸ್ಥಳಕ್ಕೆ ನುಗ್ಗುತ್ತೇವೆ ಎಂದು ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಕ್ರಮವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

26 mins ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

59 mins ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

2 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

2 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

2 hours ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

3 hours ago