ಬೆಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿರುವುದಾಗಿ ಹೇಳಿರುವ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು.
ನಿಯಮ ೬೯ರಡಿ ವಿ.ಸುನೀಲ್ಕುಮಾರ್ ವಿಷಯ ಪ್ರಸ್ತಾಪಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಮಗಿಂತ ಹೆಚ್ಚು ನಮ್ಮ ಶಾಸಕರು ಗೌರವ ಹೊಂದಿದ್ದಾರೆ. ನಮ್ಮ ಶಾಸಕಾಂಗ ಸಭೆಯಲ್ಲೂ ಭಕ್ತ-ಭಗವಂತನ ನಡುವಿನ ಸಂಬಂಧ ಹಾಳಾಗಬಾರದು ಎಂಬ ಚರ್ಚೆಯಾಗಿದೆ ಎಂದರು.
ಮಾತು ಬಿಡದ ಧರ್ಮಸ್ಥಳದ ಮಂಜುನಾಥ, ಕಾಸು ಬಿಡದ ತಿಮಪ್ಪ ಎಂಬ ಮಾತಿದೆ. ಧರ್ಮಸ್ಥಳದ ಬಗ್ಗೆ ನನಗೆ ನಂಬಿಕೆ, ಭಕ್ತಿ ಇದೆ. ಲಕ್ಷಾಂತರ ಭಕ್ತರು ಆರಾಧಿಸುತ್ತಾರೆ. ಅಲ್ಲಿ ಅನ್ನದಾಸೋಹ ನಡೆಯುತ್ತದೆ. ಅಲ್ಲಿ ನಡೆಯುತ್ತಿರುವ ಸೇವೆ ಬಗ್ಗೆ ಅನುಮಾನವಿಲ್ಲ. ಕ್ಷೇತ್ರದ ಬಗ್ಗೆಯಾಗಲಿ, ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಬಗ್ಗೆಯಾಗಲಿ ಅಲ್ಲಿನ ಪರಂಪರೆಯ ಬಗ್ಗೆ ನಿಮಗಿಂತ ಹೆಚ್ಚು ಕಾಳಜಿ ಇದೆ. ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರವಾಗುತ್ತಿದೆ. ರೋಷ-ದ್ವೇಷ ಏನೂ ಇಲ್ಲ. ಧರ್ಮಸ್ಥಳದ ಬಗ್ಗೆ ನಮ್ಮ ನಂಬಿಕೆ ಅಚಲವಾಗಿದೆ ಎಂದು ಹೇಳಿದರು.
ಬಿಜೆಪಿ ಹಿರಿಯ ಶಾಸಕ ಎಸ್.ಸುರೇಶ್ಕುಮಾರ್ ಮಾತನಾಡಿ, ಶಿವಕುಮಾರ್ ಭಕ್ತನಾಗಿ ಹೇಳಿದ್ದಾರೆಯೋ, ಡಿಸಿಎಂ ಆಗಿ ಹೇಳಿದ್ದಾರೋ ಗೊತ್ತಿಲ್ಲ. ಎಸ್ಐಟಿ ರಚನೆ ಮಾಡುವ ಹಿಂದಿನ ದಿನ ದಕ್ಷಿಣ ಕನ್ನಡ ಪೊಲೀಸರೇ ತನಿಖೆ ನಡೆಸಲು ದಕ್ಷರಾಗಿದ್ದಾರೆ ಎಂದು ಹೇಳಿದ್ದರು. ಸರ್ಕಾರದ ಹೇಳಿಕೆ ನೋಡಿದರೆ ಹೇಳಿಕೆಗೂ ನಡುವಳಿಕೆಗೂ ಸಂಬಂಧವಿಲ್ಲದಂತಾಗಿದೆ. ಅನಾಮಿಕನನ್ನು ಎಸ್ಐಟಿ ಕಸ್ಟಡಿಯಲ್ಲಿಟ್ಟುಕೊಳ್ಳಬೇಕು. ಧರ್ಮಸ್ಥಳಕ್ಕೆ ನುಗ್ಗುತ್ತೇವೆ ಎಂದು ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಕ್ರಮವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…
ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು…
ಮಹಾದೇಶ್ ಎಂ ಗೌಡ ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ…